ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್‌ ನಡುವೆ 2ನೇ ಬ್ರೇಕ್‌ಫಾಸ್ಟ್‌ ಮೀಟಿಂಗ್‌! ಪರಮೇಶ್ವರ್ ಹೇಳಿದ್ದೇನು?

ಕಳೆದೊಂದು ತಿಂಗಳಿನಿಂದ ಏನು ನಡೆಯಿತೋ ಅದನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಿಕೊಳ್ಳುವುದು. ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳಲಾಗುವುದು ಎಂದು ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
DCM DK Shivakumar, cm Siddaramaiah
ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರ ಸವಿದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಉಭಯ ನಾಯಕರು ಒಟ್ಟಿಗೆ ಸೇರುವುದು ಒಳ್ಳೆಯದು. ನಮಗೆ ಬೇಕಾಗಿರುವುದು ಆದೇ ಎಂದರು.

ಕಳೆದೊಂದು ತಿಂಗಳಿನಿಂದ ಏನು ನಡೆಯಿತೋ ಅದನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಿಕೊಳ್ಳುವುದು. ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

DCM DK Shivakumar, cm Siddaramaiah
'ಬ್ರದರ್ಸ್' ಬ್ರೇಕ್‏ಫಾಸ್ಟ್-2: ಹೈಕಮಾಂಡ್ ಹೇಳಿದಾಗ 'ಡಿಕೆ ಸಿಎಂ' ಎಂದ ಸಿದ್ದರಾಮಯ್ಯ; ಡಿಸೆಂಬರ್ 8ಕ್ಕೆ ದೆಹಲಿ ಭೇಟಿ-DKS; Video

ಸಾಮಾನ್ಯವಾಗಿ ನಾವು ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ. ನಂತರ ಒಟ್ಟಿಗೆ ಭೋಜನ ಮಾಡುತ್ತೇವೆ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ವಿಭಿನ್ನ ಜನರು ವಿಭಿನ್ನ ಆಕಾಂಕ್ಷೆಗಳನ್ನು ಹೊಂದಿರುತ್ತಾರೆ. ಅದು ತಪ್ಪೆಂದು ನಾನು ಭಾವಿಸುವುದಿಲ್ಲ. ಸ್ವಾಭಾವಿಕವಾಗಿ, ಸಮಯ ಬಂದಾಗ ಅವರು ತಮ್ಮ ಆಕಾಂಕ್ಷೆಗಳನ್ನು ವ್ಯಕ್ತಪಡಿಸುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com