ಬಳ್ಳಾರಿ: ಗಣಿಗಾರಿಕೆ ಚಟುವಟಿಕೆಗಳಿಂದ 'ದೇವದಾರು' ಅರಣ್ಯ ಉಳಿಸಲು ರೈತರಿಂದ 'ಅಪ್ಪಿಕೊ' ಚಳುವಳಿ!

ಈ ವರ್ಷದ ಆರಂಭದಲ್ಲಿ ರಾಜ್ಯವು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಗೆ ಗಣಿಗಾರಿಕೆ ಚಟುವಟಿಕೆಗಳಿಗಾಗಿ ಈ ಪ್ರದೇಶದಲ್ಲಿ ಭೂಮಿಯನ್ನು ನೀಡಿದ ನಂತರ ಪ್ರತಿಭಟನೆ ಪ್ರಾರಂಭವಾಯಿತು.
Farmers from Sandur taluk hug a tree to protect forest land in Devadari Hills
ಸ್ಥಳೀಯರಿಂದ ಅಪ್ಪಿಕೋ ಚಳುವಳಿ
Updated on

ಸಂಡೂರು: ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನರಸಿಂಗಪುರ ಮತ್ತು ರಂಜಿತಾಪುರ ಗ್ರಾಮಗಳ ರೈತರು ಕಳೆದ ಒಂದು ತಿಂಗಳಿನಿಂದ ದೇವದಾರು ಬೆಟ್ಟಗಳಲ್ಲಿರುವ 1,000 ಎಕರೆ ಅರಣ್ಯ ಭೂಮಿಯನ್ನು ಗಣಿಗಾರಿಕೆ ಚಟುವಟಿಕೆಗಳಿಂದ ರಕ್ಷಿಸಲು 'ಅಪ್ಪಿಕೋ ಚಳುವಳಿ (ಮರಗಳನ್ನು ಅಪ್ಪಿಕೊಳ್ಳಿ) ನಡೆಸುತ್ತಿದ್ದಾರೆ.

ಈ ವರ್ಷದ ಆರಂಭದಲ್ಲಿ ರಾಜ್ಯವು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL)ಗೆ ಗಣಿಗಾರಿಕೆ ಚಟುವಟಿಕೆಗಳಿಗಾಗಿ ಈ ಪ್ರದೇಶದಲ್ಲಿ ಭೂಮಿಯನ್ನು ನೀಡಿದ ನಂತರ ಪ್ರತಿಭಟನೆ ಪ್ರಾರಂಭವಾಯಿತು.

ದಶಕಗಳಿಂದ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ಬೆಟ್ಟವು ಈಗಾಗಲೇ ವ್ಯಾಪಕ ಹಾನಿಯನ್ನು ಅನುಭವಿಸಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ, ಇದರಿಂದ ಆರೋಗ್ಯ ಸಮಸ್ಯೆಗಳು, ಅರಣ್ಯ ಹಾನಿ ಮತ್ತು ವನ್ಯಜೀವಿಗಳ ಆವಾಸಸ್ಥಾನಗಳಿಗೆ ತೀವ್ರ ಆತಂಕ ಎದುರಾಗಿದೆ.

ರೈತರು ಈಗ ಪಾಳಿಯಲ್ಲಿ ಅರಣ್ಯವನ್ನು ಕಾಯುತ್ತಿದ್ದಾರೆ, ಜೊತೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಸಹ ಚಳುವಳಿಯಲ್ಲಿ ಸೇರಿಕೊಂಡಿದ್ದಾರೆ. KIOCL ನ ಟೆಂಡರ್ ಅವಧಿ ಮುಗಿಯುವ ಡಿಸೆಂಬರ್ 31 ರವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ "ಆಮ್ಲಜನಕ ಕೇಂದ್ರ" ಎಂದೇ ಪ್ರಸಿದ್ಧವಾಗಿರುವ ಶ್ರೀಮಂತ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ತನ್ನದೇ ಆದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಸ್ಥಳೀಯ ನಿವಾಸಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಮೌನೇಶ್ ಕೆ.ಬಿ. ಆರೋಪಿಸಿದ್ದಾರೆ.

ಕೆ.ಐ.ಒ.ಸಿ.ಎಲ್ ಬಿಡ್ ಪಡೆದಿದ್ದರೂ, ಕೆಲವು ಸ್ಥಳೀಯ ರಾಜಕೀಯ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳು ಅರಣ್ಯ ಹಕ್ಕುಗಳ ಸಮಿತಿಯನ್ನು ದುರುಪಯೋಗಪಡಿಸಿಕೊಂಡು ಗಣಿಗಾರಿಕೆಗೆ ನಕಲಿ ಅನುಮತಿಗಳನ್ನು ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ, ಎರಡೂ ಗ್ರಾಮಗಳ ರೈತರು, ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ ಎಂದು ಮೌನೇಶ್ ತಿಳಿಸಿದ್ದಾರೆ.

Farmers from Sandur taluk hug a tree to protect forest land in Devadari Hills
ಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ; ವಿದ್ಯಾರ್ಥಿಗಳು ವಶಕ್ಕೆ; Video

ಪ್ರತಿದಿನ, 10-15 ರೈತರ ಗುಂಪುಗಳು ಮುಂದಿನ ಪೀಳಿಗೆಗಾಗಿ ಕಾಡಿನೊಳಗೆ ಪಾಳಿಯಲ್ಲಿ ಕುಳಿತು ಅರಣ್ಯ ಕಾಯುತ್ತಿವೆ, ಅರಣ್ಯ ಇಲಾಖೆ ಮತ್ತು ಇತರ ಏಜೆನ್ಸಿಗಳ ಅಧಿಕಾರಿಗಳು ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿದರು, ಆದರೆ ನಾವು ಮಣಿಯುವುದಿಲ್ಲ. ಇದು ನಮ್ಮ ಆರೋಗ್ಯ, ನಮ್ಮ ಭವಿಷ್ಯ ವಿಷಯವಾಗಿದೆ ಎಂದು ಅವರು ಹೇಳಿದರು.

ಸಾಮಾಜಿಕ ಕಾರ್ಯಕರ್ತ ಶ್ರೀಶೈಲ್ ಆಲದಹಳ್ಳಿ ಮಾತನಾಡಿ, ಸರ್ಕಾರವು ಕೈಗಾರಿಕಾ ಯೋಜನೆಗಳಿಗಿಂತ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ನಮ್ಮ ಮುಂದಿನ ಪೀಳಿಗೆಗೆ ನಾವು ನೀಡಬಹುದಾದ ಅತ್ಯುತ್ತಮ ಸಂಪತ್ತು ಆರೋಗ್ಯಕರ ಅರಣ್ಯವಾಗಿದೆ. ಸರ್ಕಾರವು ಎಲ್ಲಾ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸುವಂತೆ KIOCL ಗೆ ಸೂಚಿಸಬೇಕು, ಇಲ್ಲದಿದ್ದರೆ ಪ್ರತಿಭಟನೆ ಮುಂದುವರಿಯುತ್ತದೆ" ಎಂದು ಅವರು ಹೇಳಿದರು.

Farmers from Sandur taluk hug a tree to protect forest land in Devadari Hills
ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆ ಕಡಿಮೆ ಮಾಡಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com