ಮೃತ ‘KSRTC ಸಿಬ್ಬಂದಿ’ಗಳ ಕುಟುಂಬಕ್ಕೆ ‘ತಲಾ 1 ಕೋಟಿ ಪರಿಹಾರ’ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 3.10 ಕೋಟಿ ಪರಿಹಾರ ಹಾಗೂ ಇಬ್ಬರು ಅವಲಂಬಿತರಿಗೆ ರೂ.14 ಲಕ್ಷದಂತೆ ರೂ.28 ಲಕ್ಷ ನೀಡಲಾಯಿತು.
Minister Ramalinga reddy
ಸಚಿವ ರಾಮಲಿಂಗಾರೆಡ್ಡಿ
Updated on

ಬೆಂಗಳೂರು: ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆ'ಯ ಅಡಿಯಲ್ಲಿ ಕರ್ತವ್ಯದ ವೇಳೆ ಮೃತಪಟ್ಟ ಮೂವರು ಕೆಎಸ್ಆರ್'ಟಿಸಿ ಸಿಬ್ಬಂದಿಯ ಕುಟುಂಬಕ್ಕೆ ತಲಾ ರೂ.1 ಕೋಟಿ ಪರಿಹಾರ ನೀಡಿರುವುದಾಗಿ ಸಾರಿಕೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 3.10 ಕೋಟಿ ಪರಿಹಾರ ಹಾಗೂ ಇಬ್ಬರು ಅವಲಂಬಿತರಿಗೆ ರೂ.14 ಲಕ್ಷದಂತೆ ರೂ.28 ಲಕ್ಷ ನೀಡಲಾಯಿತು. ಒಟ್ಟು 183 ಉದ್ಯೋಗಿಗಳಿಗೆ 18.38 ಕೋಟಿ ರೂ.ಗಳ ಸಹಾಯವನ್ನು ನೀಡಲಾಯಿತು ಎಂದು ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಈ ಮೊತ್ತವನ್ನು ವಿತರಣೆ ಮಾಡಿದರು.

ಇದೇ ವೇಳೆ ಸಚಿವರು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಹೊಸ ವಾಣಿಜ್ಯ ನಿರ್ವಹಣಾ-ಇ ವಾಣಿಜ್ಯ ಸಾಫ್ಟ್‌ವೇರ್'ಗೆ ಚಾಲನೆ ನೀಡಿದರು.

Minister Ramalinga reddy
ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಈ ಸಾಫ್ಟ್‌ವೇರ್ ಹಸ್ತಚಾಲಿತ ವ್ಯವಸ್ಥೆಯನ್ನು ಬದಲಾಯಿಸಲಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ 1,847 ವಾಣಿಜ್ಯ ಸಂಸ್ಥೆಗಳನ್ನು ಹಳೆಯ ವ್ಯವಸ್ಥೆಯಲ್ಲಿ ನಿರ್ವಹಿಸಲಾಗುತ್ತಿತ್ತು, ಅಲ್ಲಿ ಮಾಸಿಕ ಪರವಾನಗಿ ಶುಲ್ಕಗಳು, ಜಿಎಸ್‌ಟಿ, ದಂಡಗಳು ಮತ್ತು ಇನ್‌ವಾಯ್ಸ್‌ಗಳನ್ನು ಹಸ್ತಚಾಲಿತವಾಗಿ ನಿರ್ವಹಿಸಲಾಗುತ್ತಿತ್ತು, ಇದರಿಂದ ಆಗಾಗ್ಗೆ ವಿಳಂಬ ಮತ್ತು ದೋಷಗಳಿಗೆ ಕಾರಣವಾಗಿತ್ತು.

ಇದೀಗ ಅಭಿವೃದ್ಧಿಪಡಿಸಲಾದ ಸಾಫ್ಟ್ ವೇರ್, ಇ-ವಾಣೀಜ್ಯ, ಸ್ಟಾಲ್‌ಗಳು, ರಿಫ್ರೆಶ್‌ಮೆಂಟ್ ಕೊಠಡಿಗಳು ಮತ್ತು ವಾಣಿಜ್ಯ ಘಟಕಗಳನ್ನು ನಿರ್ವಹಿಸುವಲ್ಲಿ ದಕ್ಷತೆ ಮತ್ತು ಏಕರೂಪತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com