ಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದಾನೇಶ್ವರ ಸ್ವಾಮೀಜಿ
ದಾನೇಶ್ವರ ಸ್ವಾಮೀಜಿ
Updated on

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಶ್ರೀಗಳಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸ್ವಾಮೀಜಿಯ ನಿಧನದ ಸುದ್ದಿ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ದಾಸೋಹದ ಮೂಲಕವೇ ಹೆಸರುವಾಸಿಯಾಗಿದ್ದ ಶ್ರೀಗಳು ಇತ್ತೀಚೆಗೆ ಬಂಡಿಗಣಿಯಲ್ಲಿ ಸರ್ವಧರ್ಮ ಸಮಾವೇಶವನ್ನು ಆಯೋಜಿಸಿದ್ದರು. ನಾಳೆ ಸಂಜೆ 4 ಗಂಟೆಗೆ ಶ್ರೀಗಳ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

ದಾನೇಶ್ವರ ಸ್ವಾಮೀಜಿ
'ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ': ರಿಷಬ್‌ ಶೆಟ್ಟಿಗೆ ಪಂಜುರ್ಲಿ ದೈವ ಅಭಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com