'ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ': ರಿಷಬ್‌ ಶೆಟ್ಟಿಗೆ ಪಂಜುರ್ಲಿ ದೈವ ಅಭಯ; Video

ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.
Panjurli daiva
ಪಂಜುರ್ಲಿ ದೈವದಿಂದ ಅಭಯ
Updated on

ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ ನಾಯಕ ನಟನಾಗಿ ನಟಿಸಿದ ‘ಕಾಂತಾರ: ಚಾಪ್ಟರ್ 1’ ಚಿತ್ರ ಯಶಸ್ಸು ಕಂಡಿದೆ.ಇದರಲ್ಲಿ ಕರಾವಳಿ ಭಾಗದ ಜನರ ದೈವದ ನಂಬಿಕೆ, ಆಚರಣೆಯನ್ನು ಜಗತ್ತಿಗೆ ತೋರಿಸಿದ್ದಾರೆ.

ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು. ಈ ವೇಳೆ ಅವರಿಗೆ ದೈವದ ಅಭಯ ಸಿಕ್ಕಿದೆ.

ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದ್ದು, ರಿಷಬ್ ಖುಷಿಯಾಗಿದ್ದಾರೆ. ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ ಪಂಜುರ್ಲಿ ಮಮಕಾರ ತೋರಿದೆ. ಮಂಗಳೂರಿನ ಬಾರೆಬೈಲ್ ವಾರಾಯಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ.

ಸಿನಿಮಾ ನಿರ್ಮಾಣಕ್ಕೂ ಮೊದಲು ಸಿನಿಮಾ ಯಶಸ್ವಿಗಾಗಿ ಪ್ರಾರ್ಥಿಸಿ ಚಿತ್ರತಂಡದವರು ಹರಕೆ ಹೊತ್ತಿದ್ದರು. ದೈವದ ಆಶೀರ್ವಾದದಿಂದ ಸಿನಿಮಾ ಯಶಸ್ಸು ಕಂಡಿದೆ. ಹೀಗಾಗಿ, ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ಸಲ್ಲಿಸಲಾಯಿತು.

ದೈವದ ನೇಮೋತ್ಸವದಲ್ಲಿ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವು ಮಂದಿ ಭಾಗಿಯಾಗಿದ್ದರು. ದೈವದ ಪ್ರಸಾದ ಸ್ವೀಕರಿಸಿ ದೈವಾನುಗ್ರಹಕ್ಕೆ ಪಾತ್ರರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com