ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ; ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ; Video

ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಾರಿನಿಂದ ಜಿಗಿದು ಬಚಾವಾಗಲು ಸಾಧ್ಯವಾಗಲಿಲ್ಲ. ಅಧಿಕಾರಿಯನ್ನು ಉಳಿಸಲು ದಾರಿಹೋಕರು ತಮ್ಮ ಕೈಲಾದಷ್ಟು ಪ್ರಯತ್ನಿಸಿದರೂ ಸಫಲರಾಗಲಿಲ್ಲ.
ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ; ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ; Video
Updated on

ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ಮುರ್ಗೋಡಿನಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಣ್ಣಿಗೇರಿ ಬಳಿ ತಮ್ಮ ಕಾರಿನಲ್ಲಿ ಸಜೀವ ದಹನಗೊಂಡು ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಮನೆಗೆ ತಮ್ಮದೇ ಕಾರಿನಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿತು.

ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಾರಿನಿಂದ ಜಿಗಿದು ಬಚಾವಾಗಲು ಸಾಧ್ಯವಾಗಲಿಲ್ಲ. ಅಧಿಕಾರಿಯನ್ನು ಉಳಿಸಲು ದಾರಿಹೋಕರು ತಮ್ಮ ಕೈಲಾದಷ್ಟು ಪ್ರಯತ್ನಿಸಿದರೂ ಸಫಲರಾಗಲಿಲ್ಲ.

ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಇಂಧನ ಟ್ಯಾಂಕ್‌ಗೆ ಹಾನಿಯಾಗಿ ಕಿಡಿ ಬೆಂಕಿ ಹೊತ್ತಿಕೊಂಡು ಉರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಆದಾಗ್ಯೂ, ವಿವರವಾದ ತನಿಖೆಯ ನಂತರ ನಿಖರವಾದ ಕಾರಣ ತಿಳಿಯಲಿದೆ.

ಅಣ್ಣಿಗೇರಿ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಕಾರು ಬೆಂಕಿಗೆ ಆಹುತಿಯಾಗಿದ್ದು, ಅಧಿಕಾರಿ ಜೀವಂತವಾಗಿ ಸುಟ್ಟುಹೋಗಿದ್ದಾರೆ ಎಂದು ಎಸ್‌ಪಿ ಗುಂಜನ್ ಆರ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತ ಅಧಿಕಾರಿ ಧಾರವಾಡ ಮತ್ತು ಬೈಲ್‌ಹೊಂಗಲದಲ್ಲಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com