ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕ ಹಕ್ಕು ಕುಮಾರಸ್ವಾಮಿಗಿಲ್ಲ: ಸಿಎಂ ಸಿದ್ದರಾಮಯ್ಯ

ನಮ್ಮನ್ನು ಟೀಕಿಸಲು ಕುಮಾರಸ್ವಾಮಿಗೆ ಯಾವ ನೈತಿಕ ಹಕ್ಕಿದೆ? ಮೊದಲು ಅವರು ಕರ್ನಾಟಕ ಮತ್ತು ಅವರ ಕ್ಷೇತ್ರ ಮಂಡ್ಯಕ್ಕೆ ಕೇಂದ್ರ ಸಚಿವರಾಗಿ ನೀಡಿದ ಕೊಡುಗೆಗಳನ್ನು ವಿವರಿಸಲಿ.
siddaramaiah
ಸಿದ್ದರಾಮಯ್ಯ
Updated on

ಹಾಸನ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳ ಬಗ್ಗೆ ಹಾಗೂ ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳನ್ನು ಕಡಿಮೆ ಮಾಡಿದ ನಂತರ ರಾಜ್ಯಕ್ಕೆ ಆಗಿರುವ ನಷ್ಟದ ಬಗ್ಗೆ ಕುಮಾರಸ್ವಾಮಿ ಮೌನವಾಗಿದ್ದಾರೆ ಎಂದು ಹೇಳಿದರು.

ನಮ್ಮನ್ನು ಟೀಕಿಸಲು ಕುಮಾರಸ್ವಾಮಿಗೆ ಯಾವ ನೈತಿಕ ಹಕ್ಕಿದೆ? ಮೊದಲು ಅವರು ಕರ್ನಾಟಕ ಮತ್ತು ಅವರ ಕ್ಷೇತ್ರ ಮಂಡ್ಯಕ್ಕೆ ಕೇಂದ್ರ ಸಚಿವರಾಗಿ ನೀಡಿದ ಕೊಡುಗೆಗಳನ್ನು ವಿವರಿಸಲಿ. ಕೇಂದ್ರವು ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರೂ ಕುಮಾರಸ್ವಾಮಿ ಇನ್ನೂ ಮೇಕೆದಾಟು ಬಗ್ಗೆ ಮಾತನಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ AHIDNA (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಕನ್ನಡ ಸಂಕ್ಷಿಪ್ತ ರೂಪ) ಸಮುದಾಯಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, "ಕುಮಾರಸ್ವಾಮಿ ಒಬ್ಬ ಕೇಂದ್ರ ಸಚಿವರಾಗಿ ಮಾತನಾಡಬೇಕು, ಸಾಮಾನ್ಯ ವ್ಯಕ್ತಿಯಾಗಿ ಅಲ್ಲ. ಬಡವರು, ಅಲ್ಪಸಂಖ್ಯಾತರು, ದಲಿತರು, ರೈತರು, ಕಾರ್ಮಿಕರು ಮತ್ತು ಅಹಿಂದ ಸಮುದಾಯಗಳ ಜನರು ಸೇರಿದಂತೆ ಪ್ರತಿಯೊಬ್ಬ ನಾಗರಿಕರಿಗೂ ಗ್ಯಾರಂಟಿ ಯೋಜನೆಗಳು ಪ್ರಯೋಜನವನ್ನು ನೀಡುತ್ತಿದ್ದೇವೆ ಎಂದು ಸಿಎಂ ಹೇಳಿದರು.

siddaramaiah
ಮಂಡ್ಯ: ಕೃಷಿ ವಿವಿಯಲ್ಲಿ 'ಅಂತಾರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ' ಆರಂಭಕ್ಕೆ ಯತ್ನ- ಸಿದ್ದರಾಮಯ್ಯ

ಕುಮಾರಸ್ವಾಮಿ ಕೃಷಿ ಕುಟುಂಬದಿಂದ ಬಂದವರಾಗಿರುವುದರಿಂದ ಕೃಷಿ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ಬಹಿರಂಗಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು, ಮಾಜಿ ಸಿಎಂ ಕೂಡ ಕರ್ನಾಟಕ ಜಿಎಸ್‌ಟಿಯಲ್ಲಿ ಎದುರಿಸಿದ ತಾರತಮ್ಯದ ಬಗ್ಗೆ ಕೇಂದ್ರವನ್ನು ಪ್ರಶ್ನಿಸಲು ವಿಫಲರಾಗಿದ್ದಾರೆ ಎಂದು ಹೇಳಿದರು.

ಜಿಎಸ್‌ಟಿಯಿಂದಾಗಿ ನಾವು 12,000 ಕೋಟಿ ರೂ.ಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದರು.ಕೇಂದ್ರವು ಭದ್ರಾ ಮೇಲ್ದಂಡೆ ಯೋಜನೆಯನ್ನು ನಿರ್ಲಕ್ಷಿಸಿದೆ. ಬಜೆಟ್‌ನಲ್ಲಿ ಯೋಜನೆಗೆ 5,000 ಕೋಟಿ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದ್ದರೂ, ಇನ್ನೂ ಅದನ್ನು ಜಾರಿಗೆ ತಂದಿಲ್ಲ. ಕೇಂದ್ರದ ಜಿಎಸ್‌ಟಿಯಲ್ಲಿನ ಲೋಪಗಳು ಮತ್ತು ತಾರತಮ್ಯದಿಂದಾಗಿ ಕರ್ನಾಟಕದ ಬೆಳವಣಿಗೆ ದರವು ಶೇ. 12 ರಿಂದ ಶೇ.3 ಕ್ಕೆ ಕುಸಿದಿದೆ. ಕೇರಳ ಮತ್ತು ಮಹಾರಾಷ್ಟ್ರವನ್ನು ಹೊರತುಪಡಿಸಿ, ಉಳಿದ ರಾಜ್ಯಗಳು ದೇಶದಲ್ಲಿ ಶೂನ್ಯ ಬೆಳವಣಿಗೆಯ ದರವನ್ನು ಹೊಂದಿವೆ" ಎಂದು ಸಿಎಂ ಹೇಳಿದರು.

ಖಾತರಿ ಯೋಜನೆಗಳನ್ನು ಟೀಕಿಸಿದ್ದಕ್ಕಾಗಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರವು ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಬದ್ಧವಾಗಿದೆ , ಕೇಂದ್ರವು ಆದಷ್ಟು ಬೇಗ ಇದನ್ನು ಘೋಷಿಸಲಿ ಎಂದು ಸವಾಲು ಹಾಕಿದರು.

ಚಳಿಗಾಲದ ಅಧಿವೇಶನದಲ್ಲಿ ನಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಅಥವಾ ನಿಲುವಳಿ ಸೂಚನೆ ಮಂಡಿಸಿದರೆ ವಿರೋಧ ಪಕ್ಷಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ನಾವು ಸಿದ್ಧರಿದ್ದೇವೆ" ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com