

ಬೀದರ್: ಹಿಂದೂ ಎನ್ನುವುದು ಧರ್ಮವೇ ಅಲ್ಲ. ಅದು ಪರ್ಷಿಯನ್ ಭಾಷೆಯಲ್ಲಿ ಕೆಟ್ಟ ಬೈಗುಳ ಎಂದು ಹಿಂದೂ (Hindu) ಧರ್ಮದ ಬಗ್ಗೆ ಮುಂಬೈ ನಿವೃತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಜಿ ಕೋಲ್ಸೆ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಬೀದರ್ ನ ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಮಾತನಾಡಿದ ಕೋಲ್ಸೆ, ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಟೀಕಿಸುವ ಭರದಲ್ಲಿ ಹಿಂದೂ ಧರ್ಮವನ್ನು ಟೀಕಿಸಿದ್ದಾರೆ.
ಹಿಂದೂ ಅಂದರೆ ಪರ್ಷಿಯನ್ ಭಾಷೆಯಲ್ಲಿ ಬೈಗುಳ. ಹಿಂದೂ ಧರ್ಮವೇ ಇಲ್ಲ. ಬ್ರಾಹ್ಮಣರು ಅವರ ಬುದ್ಧಿಯಿಂದ ನಮ್ಮನ್ನು ಗುಲಾಮರನ್ನಾಗಿಸಿ, ಹಿಂದೂ ಧರ್ಮವನ್ನು ಸೃಷ್ಟಿಸಿದರು. ಸೂಫಿ ಸಂತರು, ಮೌಲ್ವಿಗಳು ಕಾರ್ಯಗಾರಗಳನ್ನು ನಡೆಸಿ ಈ ಇತಿಹಾಸವನ್ನು ಹೇಳಬೇಕು ಎಂದರು. ದೇಶದಲ್ಲಿನ ಎಲ್ಲಾ ದಂಗೆಗಳಿಗೆ RSS ಕಾರಣ, ಸಿಖ್ರ ದಂಗೆಗೂ ಆರ್ಎಸ್ಎಸ್ ಕಾರಣ. ಅವರ ವಿರುದ್ಧ ಮಾತನಾಡಲು ಅನೇಕರು ಭಯಪಡುತ್ತಾರೆ. RSS ಹಾಗೂ ಬ್ರಾಹ್ಮಣರ ವಿರುದ್ಧ ಮಾತನಾಡಲು ಭಯಪಡಬೇಡಿ. ದೇಶದಲ್ಲಿ ಅವರು ಕೇವಲ ಒಂದು ಪರ್ಸೆಂಟ್ ಮಾತ್ರ ಇದ್ದಾರೆ. ಬ್ರಾಹ್ಮಣರು ಪುಕ್ಕಲರು ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
Advertisement