ತಮ್ಮ ಸೇವೆ ಖಾಯಂಗೊಳಿಸುವಂತೆ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರು ಆಗ್ರಹ

ಬೆಂಗಳೂರು ವಿಶ್ವವಿದ್ಯಾಲಯವು 1998 ರಿಂದ ಖಾಲಿ ಇರುವ ಪ್ರಾಧ್ಯಾಪಕ ಅಥವಾ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಯಾವುದೇ ನೇಮಕಾತಿಯನ್ನು ನಡೆಸಿಲ್ಲ ಎಂದು ಸಂಘದ ಅಧ್ಯಕ್ಷ ಡಾ. ಗಂಗಾಧರ ರೆಡ್ಡಿ ಎನ್ ಅವರು ಹೇಳಿದ್ದಾರೆ.
University guest lecturers seek regularisation of service in Karnataka
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ತಮ್ಮ ಸೇವೆಯನ್ನು ಆದಷ್ಟು ಬೇಗ ಕಾಯಂಗೊಳಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯವು 1998 ರಿಂದ ಖಾಲಿ ಇರುವ ಪ್ರಾಧ್ಯಾಪಕ ಅಥವಾ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಯಾವುದೇ ನೇಮಕಾತಿಯನ್ನು ನಡೆಸಿಲ್ಲ ಎಂದು ಸಂಘದ ಅಧ್ಯಕ್ಷ ಡಾ. ಗಂಗಾಧರ ರೆಡ್ಡಿ ಎನ್ ಸೋಮವಾರ ಹೇಳಿದ್ದಾರೆ.

ಇದು ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನೆಯ ಗುಣಮಟ್ಟ ಕುಸಿಯಲು ಕಾರಣವಾಗುತ್ತದೆ ಎಂದು ಅವರು ಹೇಳಿದರು.

ಮೈಸೂರು, ತುಮಕೂರು, ಹಂಪಿ, ಗುಲ್ಬರ್ಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯ ಸೇರಿದಂತೆ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿಯೂ "ಅತಿಥಿ ಉಪನ್ಯಾಸಕರೇ ಶೇ. 94 ರಷ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

University guest lecturers seek regularisation of service in Karnataka
ಸೇವೆ ಕಾಯಂಗೊಳಿಸುವಂತೆ ಒತ್ತಾಯ; ರಕ್ತದಲ್ಲಿ ಸರ್ಕಾರಕ್ಕೆ ಪತ್ರ ಬರೆದ ಕೊಪ್ಪಳದ ಅತಿಥಿ ಉಪನ್ಯಾಸಕರು

ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟಿನ(NIRF) ಅಡಿಯಲ್ಲಿ ಉತ್ತಮ ಶ್ರೇಯಾಂಕಕ್ಕಾಗಿ ಮತ್ತು ಕೇಂದ್ರ ನಿಧಿಯನ್ನು ಪಡೆಯಲು, ವಿಶ್ವವಿದ್ಯಾಲಯವು ಅತಿಥಿ ಉಪನ್ಯಾಸಕರ ಪಟ್ಟಿಯನ್ನು ಸಲ್ಲಿಸಿದೆ. ಅತಿಥಿ ಉಪನ್ಯಾಸಕರು SLET, NET ಮತ್ತು PhD ಸೇರಿದಂತೆ ಯುಜಿಸಿ ಮಾನದಂಡಗಳ ಪ್ರಕಾರ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ ಮತ್ತು 15 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ. ಈ ಅರ್ಹತೆಗಳ ಹೊರತಾಗಿಯೂ, ಅವರ ಸೇವೆಗಳನ್ನು ಕಾಯಂಗೊಳಿಸಲಾಗಿಲ್ಲ. ಅವರಿಗೆ ರೂ. 25,000 ರಿಂದ ರೂ. 50,000 ರವರೆಗೆ ಮಾತ್ರ ವೇತನ ನೀಡಲಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com