'ಗ್ಯಾರಂಟಿ ಮಾತ್ರ ನಂಬ್ಕೊಂಡಿದ್ರೆ ಆಗೋದಿಲ್ಲ, ಅಭಿವೃದ್ಧಿನೂ ಆಗ್ಬೇಕು ಅನ್ನೋದು ಕೈ ಶಾಸಕರ ಅಭಿಪ್ರಾಯ': ಕೆ ಎನ್ ರಾಜಣ್ಣ

ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಜೊತೆಗೆ ಅಭಿವೃದ್ಧಿ ಕೆಲಸಗಳು ಕೂಡ ಆದರೆ ನಮಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಸಲಹೆ ನೀಡಲಾಗಿದೆ ಎಂದರು.
K N Rajanna
ಕೆ ಎನ್ ರಾಜಣ್ಣ
Updated on

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಆಗಬೇಕು ಎಂಬುದನ್ನು ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರು ಅಭಿಪ್ರಾಯ ಹೊರಹಾಕಿದ್ದಾರೆ ಎಂದು ಹಿರಿಯ ಶಾಸಕ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಜೊತೆಗೆ ಅಭಿವೃದ್ಧಿ ಕೆಲಸಗಳು ಕೂಡ ಆದರೆ ನಮಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಸಲಹೆ ನೀಡಲಾಗಿದೆ ಎಂದರು.

K N Rajanna
'ಶ್ರೀಮಂತರಿಗೂ ಉಚಿತ ವಿದ್ಯುತ್ ಕೊಡಬೇಕಾ, ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ ನೀಡಬೇಕಾ': 'ಕೈ' ಶಾಸಕರ ಅಸಮಾಧಾನ !

ಎಐಸಿಸಿ ಅಧ್ಯಕ್ಷರ ಸೂಚನೆಯಂತೆ ಯಾವ ಮಂತ್ರಿಗಳೂ, ಶಾಸಕರು ಸಿಎಂ ಬದಲಾವಣೆ ಬಗ್ಗೆ ಚರ್ಚೆಯೂ ಮಾಡಬಾರದು, ಪ್ರಸ್ತಾಪ ಕೂಡ ಮಾಡಬಾರದು ಎಂದು ಬಂದಿದೆ. ಹಾಗಾಗಿ ನಾಯಕತ್ವ ಬದಲಾವಣೆ ವಿಚಾರವಾಗಿ ಯಾವ ಪ್ರಸ್ತಾಪನೂ ಇಲ್ಲ, ಚರ್ಚೆಯೂ ಶಾಸಕಾಂಗ ಸಭೆಯಲ್ಲಿ ಆಗಿಲ್ಲ, ಅದರ ಪುನರುಚ್ಛಾರದ ಅಗತ್ಯವೂ ಇಲ್ಲ ಎಂದರು.

ಬಿಜೆಪಿ ಲೇವಡಿ: ಇನ್ನೊಂದೆಡೆ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಕಾಂಗ್ರೆಸ್ ಶಾಸಕರೇ ವಿರೋಧಿಸುತ್ತಿದ್ದಾರೆ, ಅವರಿಗೇ ಈಗ ಅದರ ನ್ಯೂನತೆಗಳ ಬಗ್ಗೆ ಅರ್ಥವಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಲೇವಡಿ ಮಾಡಿದೆ.

K N Rajanna
'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com