

ಪುತ್ತೂರು: ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಮುಖಂಡ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪೋತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆಜೆ ಮಹೇಶ್ ವಾದ ಮಂಡಿಸಿದ್ದರು.
Advertisement