ಮಂಡ್ಯ To ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!

ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.
ಉದ್ಯಮಿ ಮಹೇಶ್ ಮೇಲೆ ಹಲ್ಲೆ
ಉದ್ಯಮಿ ಮಹೇಶ್ ಮೇಲೆ ಹಲ್ಲೆ
Updated on

ಮಡಿಕೇರಿ: ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಚನಾ, ಮಾಲತಿ, ದರ್ಶನ್ ಮತ್ತು ರವಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 12ರಂದು ಕೊಡಗಿನ ಮಡಿಕೇರಿಯಲ್ಲಿ ಈ ಘಟನೆ ನಡೆದಿತ್ತು. ಇನ್ನು ಈ ಕೃತ್ಯದಲ್ಲಿ ಭಾಗಿಯಾಗಿರುವ ಉಳಿದ ಶಂಕಿತರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿವಾಸಿಯಾಗಿರುವ ಸಂತ್ರಸ್ತ ಮಹೇಶ್ ಫೇಸ್‌ಬುಕ್ ಮೂಲಕ ರಚನಾ ಎಂಬ ಮಹಿಳೆ ಸ್ನೇಹ ಬೆಳೆಸಿಕೊಂಡಿದ್ದನು. ಆಕೆ ನವೆಂಬರ್ 28ರಂದು ಫೋನ್‌ಪೇ ಮೂಲಕ 5000 ರೂಪಾಯಿ ಹಣ ಪಡೆದುಕೊಂಡಿದ್ದಳು. ಹಣವನ್ನು ಹಿಂದಿರುಗಿಸುವಂತೆ ಮಹೇಶ್ ಕೇಳಿದಾಗ, ಮಹಿಳೆ ಮೈಸೂರು ಅಥವಾ ಕುಶಾಲನಗರಕ್ಕೆ ಬರುವಂತೆ ಹೇಳಿದ್ದಳು. ಇನ್ನು ಡಿಸೆಂಬರ್ 12ರಂದು ಮಹೇಶನನ್ನು ಮಡಿಕೇರಿಗೆ ಕರೆಸಿ ಮಾರುಕಟ್ಟೆ ಪ್ರದೇಶದ ಬಳಿಯ ಮನೆಗೆ ಕರೆದೊಯ್ದಿದ್ದಳು. ಅಲ್ಲಿ ಮಹೇಶನ ಜೊತೆ ಸ್ವಲ್ಪ ಸಮಯ ಕಳೆದಿದ್ದು ಅಲ್ಲದೆ ಸಂಜೆ ಮದ್ಯ ಸೇವಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂದು ರಾತ್ರಿ ತುರ್ತು ಕಾರಣ ನೀಡಿ ರಚನಾ ಮನೆಯಿಂದ ಹೊರಟುಹೋಗಿದ್ದಳು. ಆಕೆ ಹೋದ ನಂತರ, ಮೂವರು ಪುರುಷರು ಮನೆಗೆ ನುಗ್ಗಿ ಮಹೇಶನ ಮೇಲೆ ಕೋಲು ಮತ್ತು ಕತ್ತಿಯ ಹಿಡಿಕೆಯಿಂದ ಹಲ್ಲೆ ನಡೆಸಿ, ಮುಖ, ಬಾಯಿ, ಎದೆ ಮತ್ತು ಕಾಲಿಗೆ ಗಾಯಗೊಳಿಸಿದ್ದಾರೆ. ಅಲ್ಲದೆ ಬಲವಂತವಾಗಿ ಬಂಧಿಸಿ, ವಿವಸ್ತ್ರಗೊಳಿಸಿ, ನಗ್ನ ವಿಡಿಯೋವನ್ನು ರೆಕಾರ್ಡ್ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಆರೋಪಿಗಳು ನಕಲಿ ಬಂದೂಕು ತೋರಿಸಿ 50 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದು ಹಣ ನೀಡದಿದ್ದರೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿದ್ದಾರೆ. ಡಿಸೆಂಬರ್ 13ರ ಮುಂಜಾನೆ ಮೂತ್ರಕ್ಕೆ ಹೋಗಬೇಕು ಎಂದು ಹೇಳಿ ಮಹೇಶ್ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯಮಿ ಮಹೇಶ್ ಮೇಲೆ ಹಲ್ಲೆ
ಮಡಿಕೇರಿ: Facebook ಗೆಳತಿ ಮಾತು ನಂಬಿ ರೂಂಮಿಗೆ ಬಂದ ಯುವಕ; ಅರೆಬೆತ್ತಲಾಗಿ ನಡುರಸ್ತೆಯಲ್ಲಿ ಓಡಿದ್ದು ನೋಡಿ ದಂಗಾದ ಜನ!

ಮಹೇಶ್ ತಪ್ಪಿಸಿಕೊಂಡಿದ್ದನ್ನು ಗಮನಿಸಿದ ಆರೋಪಿಗಳು ಆಟೋರಿಕ್ಷಾದಲ್ಲಿ ಮಹೇಶ್ ನನ್ನು ಅಪಹರಿಸಲು ಯತ್ನಿಸಿದ್ದಾರೆ. ಇದು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಮಡಿಕೇರಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 310(2) (ದರೋಡೆ), 127(2) (ಅಕ್ರಮ ಬಂಧನ), 118(1) (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು ಅಥವಾ ಗಂಭೀರ ಗಾಯಗೊಳಿಸುವುದು) ಮತ್ತು 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೆ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com