ರೌಡಿ ಶೀಟರ್ 'ಬಿಕ್ಲು ಶಿವು' ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ನಿರೀಕ್ಷಣಾ ಜಾಮೀನು, ನಿರಾಕರಿಸಿದ ಹೈಕೋರ್ಟ್!

ಬಂಧನಕ್ಕೆ ಒಳಗಾಗಿರುವ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.
MLA Byrathi Basavaraj  With Rowdy sheeter Biklu shivu
ರೌಡಿ ಶೀಟರ್ ಬಿಕ್ಲು ಶಿವು, ಶಾಸಕ ಬೈರತಿ ಬಸವರಾಜ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತನಿಖೆ ವೇಳೆ ಎಫ್‌ಐಆರ್‌ನಲ್ಲಿ ಐದನೇ ಆರೋಪಿ ಎಂದು ಹೆಸರಿಸಲಾದ ಶಾಸಕ ಬೈರತಿ ಬಸವರಾಜನ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

ಬಂಧನಕ್ಕೆ ಒಳಗಾಗಿರುವ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್, ಬಸವರಾಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದಾರೆ. ಸೂಕ್ತ ಅರ್ಜಿಯೊಂದಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ನ್ಯಾಯಾಲಯ ಸೂಚಿಸಿದೆ. ಗಮನಾರ್ಹವೆಂದರೆ, ಬಂಧನದಿಂದ ಯಾವುದೇ ಮಧ್ಯಂತರ ರಕ್ಷಣೆಯನ್ನು ನೀಡಲು ಹೈಕೋರ್ಟ್ ನಿರಾಕರಿಸಿತು.

MLA Byrathi Basavaraj  With Rowdy sheeter Biklu shivu
ರೌಡಿಶೀಟರ್ ಕೊಲೆ ಪ್ರಕರಣ: 3 ಗಂಟೆಗಳಿಗೂ ಹೆಚ್ಚು ಕಾಲ ಶಾಸಕ ಬೈರತಿ ಬಸವರಾಜ್ ವಿಚಾರಣೆ

ಇದರಿಂದ ತನಿಖಾ ಸಂಸ್ಥೆಗಳು ತನಿಖೆಯ ಭಾಗವಾಗಿ ಶಾಸಕರನ್ನು ಕರೆಸುವ ಅಥವಾ ಬಂಧಿಸುವ ಹಾದಿಯನ್ನು ಸುಗಮಗೊಳಿಸಿತು. ಆದರೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ)ದ ನಿಬಂಧನೆಗಳು ಈ ಪ್ರಕರಣಕ್ಕೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ನ್ಯಾಯಾಲಯ ಸೀಮಿತ ಪರಿಹಾರವನ್ನು ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com