MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

ತನಿಖಾ ಸಂಸ್ಥೆ ಮುಂದಿನ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ. ಆದ್ದರಿಂದ ಈಗಾಗಲೇ ಸಲ್ಲಿಸಿರುವ ವರದಿಯ ಆಧಾರದಲ್ಲೇ ನ್ಯಾಯಾಲಯ ಮುಂದುವರಿಯಬೇಕಾಗುತ್ತದೆ.
CM Siddaramaiah
ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮುಡಾದಲ್ಲಿ ನಡೆದ ನಿವೇಶನ ಹಂಚಿಕೆ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಮೂವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ವರದಿಯ ಮೇಲೆ ಆದೇಶ ನೀಡಲು, ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಡೈರಿಯನ್ನು ಡಿಸೆಂಬರ್ 23ರೊಳಗೆ ಹಾಜರುಪಡಿಸುವಂತೆ ವಿಶೇಷ ನ್ಯಾಯಾಲಯ ಗುರುವಾರ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (SPP) ಸೂಚನೆ ನೀಡಿದೆ.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ ಸೇರಿ ಇತರರಿಗೆ ಕ್ಲೀನ್‌ಚಿಟ್‌ ನೀಡಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ' ರಿಪೋರ್ಟ್‌ನ ಆಕ್ಷೇಪಣಾ ಅರ್ಜಿ ಕುರಿತು ನ್ಯಾಯಾಲಯ ಗುರುವಾರ ವಿಚಾರಣೆ ನಡೆಸಿತು.

ತನಿಖಾ ಸಂಸ್ಥೆ ಮುಂದಿನ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ. ಆದ್ದರಿಂದ ಈಗಾಗಲೇ ಸಲ್ಲಿಸಿರುವ ವರದಿಯ ಆಧಾರದಲ್ಲೇ ನ್ಯಾಯಾಲಯ ಮುಂದುವರಿಯಬೇಕಾಗುತ್ತದೆ. ಹೀಗಾಗಿ ಮುಂದಿನ ವಿಚಾರಣೆಯೊಳಗೆ ಕೇಸ್ ಡೈರಿಯನ್ನು ಸಲ್ಲಿಸಬೇಕು. ಮಧ್ಯಂತರದಲ್ಲಿ ದೂರುದಾರರು ಅಥವಾ ಜಾರಿ ನಿರ್ದೇಶನಾಲಯ (ED) ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಹೇಳಿದರು. ಇದೇ ವೇಳೆ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಲೋಕಾಯುಕ್ತ ಪರ ವಿಶೇಷ ಸಾರ್ವಜನಿಕ ಅಭಿಯೋಜಕ ವೆಂಕಟೇಶ್ ಅರ್ಬಟ್ಟಿ ಸ್ಥಿತಿಗತಿ ವರದಿ ಸಲ್ಲಿಸಿ, ತನಿಖೆ ಅಂತಿಮ ಹಂತದಲ್ಲಿದ್ದು ಅನುಮತಿ ಆದೇಶ (ಸ್ಯಾಂಕ್ಷನ್) ಪಡೆಯಬೇಕಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಆದರೆ, ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು ವಾದ ಮಂಡಿಸಿ, ಪ್ರಕರಣದ ಆರೋಪಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಮಲ್ಲಿಕಾರ್ಜುನ ಹಾಗೂ ದೇವರಾಜ್ ವಿರುದ್ಧ ಯಾವುದೇ ಮುಂದಿನ ತನಿಖೆ ಇದುವರೆಗೂ ನಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ತನಿಖಾ ಸಂಸ್ಥೆ ಪ್ರಕರಣವನ್ನು ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

CM Siddaramaiah
ಬಗೆದಷ್ಟು ಹೊರಬರುತ್ತಿದೆ ಮುಡಾ ಹಗರಣ: 700 ಕೋಟಿ ರೂ ಮೌಲ್ಯದ ಅಕ್ರಮ ನಿವೇಶನಗಳ ಮಾರಾಟ; ಮಾಜಿ ಆಯುಕ್ತರಿಂದ 22 ಕೋಟಿ ರೂ ಲಂಚ ಸ್ವೀಕಾರ!

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿಪಿ, ತನಿಖಾ ವರದಿಯ ಅಂತಿಮ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ನಾವು ಸಿದ್ಧರಿದ್ದೇವೆ, ತನಿಖೆಯ ವಿಶ್ವಾಸಾರ್ಹತೆಯನ್ನು ತೋರಿಸಲು ಕೇಸ್ ಡೈರಿ ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಬೇಕು ಎಂದು ಹೇಳಿದರು.

ಈ ವೇಳೆ ಹಿಂದಿನ ವಿಚಾರಣೆಯಲ್ಲಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶಿಸಿದ್ದುದನ್ನು ಗಮನಿಸಿದ ನ್ಯಾಯಾಲಯ, ತನಿಖೆ ಪೂರ್ಣವಾಗದ ಕಾರಣ ‘ಬಿ’ ವರದಿಯ ಮೇಲೆ ಆದೇಶವನ್ನು ಮುಂದೂಡಲಾಗಿತ್ತು ಎಂದು ಸ್ಪಷ್ಟಪಡಿಸಿತು.ತನಿಖಾಧಿಕಾರಿಯ ಮನವಿಯ ಮೇರೆಗೆ ಮುಂದಿನ ತನಿಖೆಗೆ ಅವಕಾಶ ನೀಡಲಾಗಿತ್ತು.

ಅಕ್ಟೋಬರ್ 9ರಂದು ತನಿಖೆ ಪೂರ್ಣಗೊಳಿಸಲು ಎರಡು ತಿಂಗಳಾವಕಾಶ ನೀಡಲಾಗಿತ್ತು. ಡಿಸೆಂಬರ್ 4ರಂದು, ತನಿಖೆಯನ್ನು ಸಾಧ್ಯವಾದಷ್ಟು ಬೇಗ ಹಾಗೂ ಗರಿಷ್ಠ ಎರಡು ತಿಂಗಳೊಳಗೆ ಮುಗಿಸಬೇಕು ಎಂದು ಸೂಚಿಸಲಾಗಿತ್ತು.

ಇದರ ಅರ್ಧ ಅವಧಿಯ ಕೊನೆಯ ದಿನದವರೆಗೂ ಕಾಯಬೇಕು ಎಂದಲ್ಲ. ಮುಂದಿನ ವಿಚಾರಣೆಗೆ ಮತ್ತಷ್ಟು ಮುಂದೂಡಿಕೆ ನೀಡುವುದಿಲ್ಲ ಎಂದು ನ್ಯಾಯಾಲಯ ತಿಳಿಸಿತು.

ಇದೇ ವೇಳೆ, ಮಾಜಿ MUDA ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಡಿಸೆಂಬರ್ 31ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com