ದಾವಣಗೆರೆ: ತಾಳೆ ಬೆಳೆ ರಕ್ಷಿಸಲು ಹೋಗಿ ರೈತ ಸಜೀವದಹನ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ ಮೃತ ರೈತರಾಗಿದ್ದಾರೆ.
ಮೃತ ರೈತ
ಮೃತ ರೈತ
Updated on

ದಾವಣಗೆರೆ: ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ ಮಾಡಲು ಹೋಗಿ ರೈತರೊಬ್ಬರು ಸಜೀವ ದಹನವಾಗಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ನಡೆದಿದೆ,

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ (75ವ) ಎಂಬುವವರ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತಾಳೆ ಮರ ಬೆಳೆಯಲಾಗಿದ್ದು, ಇದ್ದಕ್ಕಿದ್ದಂತೆ ತಾಳೆ ಮರಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗಾಬರಿಗೊಂಡ ರೈತ ಈಶ್ವರಪ್ಪ ಬೆಂಕಿ ನಂದಿಸಲು ಹೋಗಿ ತಾವೇ ಸಜೀವ ದಹನಗೊಂಡಿದ್ದಾರೆ.

ಮೃತ ರೈತ
ಚಿತ್ರದುರ್ಗ ಬಸ್ ಅಪಘಾತ: ಆರು ಮಂದಿ 'ಸಜೀವ ದಹನ'; ಅಶ್ಚರ್ಯಕರ ರೀತಿಯಲ್ಲಿ 42 ಶಾಲಾ ಮಕ್ಕಳು ಪಾರು! Video

ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಮನೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಸುಟ್ಟು ಕರಕಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಐಕೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಎಲ್ಲರೂ ಕೆಲಸಕ್ಕೆ ಹೋದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮಹೆಬೂಬ್ ಎನ್ನುವವರಿಗೆ ಸೇರಿದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಮನೆ ವ್ಯಾಪಿಸಿಕೊಂಡಿತು. ಪರಿಣಾಮ ಮನೆಯಲ್ಲಿದ್ದ 2 ಲಕ್ಷ ನಗದು ಹಾಗೂ 30 ಗ್ರಾಂ ಚಿನ್ನ ಸುಟ್ಟು ಕರಲಾಗಿದೆ.

ರಾಗಿ ಮೆದೆಗೆ ಬೆಂಕಿ

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಜಯಪುರ ಗೇಟ್​ ಬಳಿ ಅಗ್ನಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳು ಬೇಕಂತಲೇ ರಾಗಿ ಮೆದೆಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ. ಇದರಿಂದ ಒಕ್ಕಣೆ ಮಾಡಲು ಹಾಕಲಾಗಿದ್ದ ರಾಗಿ ಮೆದೆ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com