ನಮ್ಮ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ವೈಷ್ಣವ್ ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ: ಸಿದ್ದರಾಮಯ್ಯ

'ಡಬಲ್ ಎಂಜಿನ್ ಸರ್ಕಾರ' ಇರುವ ರಾಜ್ಯಗಳಲ್ಲಿ ಕರ್ನಾಟಕದ ಈ ಪ್ರಗತಿ ಸಾಧಿಸಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
Ashwini Vaishnaw-Siddaramaiah
ಅಶ್ವಿನಿ ವೈಷ್ಣವ್-ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ 'ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. 'ಡಬಲ್ ಎಂಜಿನ್ ಸರ್ಕಾರ' ಇರುವ ರಾಜ್ಯಗಳಲ್ಲಿ ಕರ್ನಾಟಕದ ಈ ಪ್ರಗತಿ ಸಾಧಿಸಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಘಟಕ ತೆರೆದ 8-9 ತಿಂಗಳಲ್ಲಿ 30 ಸಾವಿರ ಮಂದಿಗೆ ತೈವಾನ್‌ ಮೂಲದ ಫಾಕ್ಸ್‌ಕಾನ್‌ ಕಂಪನಿ ಉದ್ಯೋಗ ನೀಡಿದ ಸುದ್ದಿಯನ್ನು ಹಂಚಿಕೊಂಡ ರಾಹುಲ್‌ ಗಾಂಧಿ ಇದು ಕರ್ನಾಟಕ ಮಾದರಿ ಎಂದು ಟ್ವೀಟ್ ಮಾಡಿದ್ದರು. ಈ ಪೋಸ್ಟ್‌ಗೆ ಅಶ್ವಿನಿ ವೈಷ್ಣವ್‌ ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಯಶಸ್ಸನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಹುಲ್‌ ಗಾಂಧಿಗೆ ಧನ್ಯವಾದಗಳು. ನೀವು ಗಮನಿಸಿದಂತೆ ನಮ್ಮ ಪ್ರಧಾನಿಯವರ ದೃಷ್ಟಿಕೋನವನ್ನು ನಾವು ಕಾರ್ಯಗತಗೊಳಿಸುತ್ತಿದ್ದಂತೆ ನಾವು ಉತ್ಪಾದಕ ಆರ್ಥಿಕತೆಯಾಗುತ್ತಿದ್ದೇವೆ ಬರೆದು ಟಾಂಗ್‌ ನೀಡಿದ್ದರು.

ಕೇಂದ್ರ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮೇಕ್ ಇನ್ ಇಂಡಿಯಾ ನಿಜವಾಗಿಯೂ ಯಶಸ್ವಿಯಾದರೆ, ಬಿಜೆಪಿಯ 'ಡಬಲ್-ಎಂಜಿನ್' ರಾಜ್ಯಗಳು ಕರ್ನಾಟಕ ನೀಡಿರುವ ಸಾಧನೆಗಳಿಗೆ ಹೊಂದಿಕೆಯಾಗಲು ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದರು. ನಿಮ್ಮಲ್ಲಿ ಯಾವುದೇ ಸಾಧನೆಗಳು ಇಲ್ಲದಿರುವಾಗ, ನೀವು ಇತರರ ಯಶಸ್ಸನ್ನು ಕದಿಯುತ್ತೀರಿ ಮತ್ತು ಕ್ರೆಡಿಟ್ ತೆಗೆದುಕೊಳ್ಳುತ್ತೀರಿ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ. ತೈವಾನ್‌ನ ಎಲೆಕ್ಟ್ರಾನಿಕ್ಸ್ ದೈತ್ಯ ಫಾಕ್ಸ್‌ಕಾನ್ ಐಫೋನ್‌ಗಳ ಅತಿದೊಡ್ಡ ತಯಾರಕರಾಗಿದ್ದು, ಚೀನಾದ ಹೊರಗೆ ಅದರ ಎರಡನೇ ಅತಿದೊಡ್ಡ ಘಟಕ ಬೆಂಗಳೂರಿನ ದೇವನಹಳ್ಳಿಯಲ್ಲಿದೆ.

Ashwini Vaishnaw-Siddaramaiah
ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com