Mysuru helium cylinder blast case: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರ ಸಾವು, ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಗುರುವಾರ (ಡಿ.25) ರಾತ್ರಿ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್​ಗೆ ಹೀಲಿಯಂ ತುಂಬುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿತ್ತು.
Mysuru
ಮೈಸೂರು
Updated on

ಮೈಸೂರು: ಕ್ರಿಸ್‌ಮಸ್ ಹಬ್ಬದ ದಿನದಂದು ಮೈಸೂರು ಅರಮನೆಯ ಮುಂಭಾಗ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರಸಾವನ್ನಪ್ಪಿದ್ದು, ಇದರೊಂದಿಗೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ನಂಜನಗೂಡಿನ ಚಾಮಲಾಪುರದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮಿ (29) ಮೃತಪಟ್ಟ ಮಹಿಳೆಯರಾಗಿದ್ದಾರೆ.

ಗುರುವಾರ (ಡಿ.25) ರಾತ್ರಿ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್​ಗೆ ಹೀಲಿಯಂ ತುಂಬುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿತ್ತು.

ಘಟನೆಯಲ್ಲಿ, ಸಲೀಂ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಹಾಗೂ ಲಕ್ಷ್ಮಿ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇವರಿಬ್ಬರೂ ಶುಕ್ರವಾರ ಸಾವನ್ನಪ್ಪಿದ್ದಾರೆ.

ಮೃತ ಸಲೀಂ ಅರಮನೆಯ ಸುತ್ತಮುತ್ತಲಿನ ಪ್ರವಾಸಿ ಪ್ರದೇಶಗಳಲ್ಲಿ ಐಸ್ ಕ್ರೀಮ್ ಮತ್ತು ಬಲೂನ್‌ಗಳನ್ನು ಮಾರಾಟ ಮಾಡಲು ಕೆಲವು ತಿಂಗಳ ಹಿಂದೆ ಮೈಸೂರಿಗೆ ಬಂದಿದ್ದು, ಮೈಸೂರಿನ ಲಾಡ್ಜ್‌ನಲ್ಲಿ ಮೂವರು ಸಹೋದ್ಯೋಗಿಗಳೊಂದಿಗೆ ತಂಗಿದ್ದ ಎಂದು ತಿಳಿದುಬಂದಿದೆ.

Mysuru
ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಪೋಟ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಇನ್ನು ಲಕ್ಷ್ಮಿ ಅವರ ಪತಿ ರಾಜೇಶ್ ಅವರು ಮೂಲತಃ ಮಂಡ್ಯದ ಹೊಸಹಳ್ಳಿ ಗ್ರಾಮದ ನಿವಾಸಿಯಾಗಿದ್ದು. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಮಕ್ಕಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ, ಗುರುವಾರ ಮೈಸೂರಿನ ಬೆಳವಾಡಿಯ ಸಂಬಂಧಿಕರ ಮನೆಗೆ ಲಕ್ಷ್ಮೀ ಬಂದಿದ್ದರು.

ಅರಮನೆ ನೋಡಲು ಹೋದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೀಲಿಯಂ ಸಿಲಿಂಡರ್ ಸ್ಪೋಟದಿಂದಾಗಿ ಲಕ್ಷ್ಮಿ ಅವರು ಗಂಭೀರ ಗಾಯಗೊಂಡಿದ್ದರು.

ಪತ್ನಿ, ಅವರ ಇಬ್ಬರು ಮಕ್ಕಳು ಮತ್ತು ಸಹೋದರಿ ರಂಜಿತಾ ಕ್ರಿಸ್‌ಮಸ್ ರಜೆಗಾಗಿ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದರು. ಮೈಸೂರಿನಲ್ಲಿರುವ ನಮ್ಮ ಸಂಬಂಧಿಕರ ಮನೆಯಲ್ಲಿ ತಂಗಿದ್ದರು. ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ, ಪುಷ್ಪ ಪ್ರದರ್ಶನವನ್ನು ನೋಡಲು ಮೈಸೂರು ಅರಮನೆಗೆ ತೆರಳಿದ್ದಾರೆಂದು ಲಕ್ಷ್ಮೀ ಅವರ ಪತಿ ರಾಜೇಶ್ ಅವರು ಹೇಳಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು, ಕೆಎಸ್‌ಆರ್‌ಟಿಸಿ ಉದ್ಯೋಗಿ ಕೊಟ್ರೇಶ್ ಬೀರಪ್ಪ ಗಟ್ಟರ್ ಮತ್ತು ರಂಜಿತಾ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಬ್ಬರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆಂದು ತಿಳಿದುಬಂದಿದೆ.

ಏತನ್ಮಧ್ಯೆ, ಶುಕ್ರವಾರ ಬೆಳಿಗ್ಗೆ ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಫೋಟದ ನಿಖರವಾದ ಕಾರಣವನ್ನು ನಿರ್ಧರಿಸಲು ಸಾಕ್ಷ್ಯಗಳು ಮತ್ತು ತಾಂತ್ರಿಕ ಮಾಹಿತಿಗಳನ್ನು ಸಂಗ್ರಹಿಸಿತು.

Mysuru
ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ; Video

ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಅವರು ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

ಸ್ಫೋಟದ ಹಿಂದೆ ಯಾವುದೇ ದುರುದ್ದೇಶವಿಲ್ಲ. ಮೃತ ವ್ಯಕ್ತಿ ಸಲೀಂ ಪ್ರವಾಸದ ಋತುಗಳನ್ನು ಅವಲಂಬಿಸಿ ವಿವಿಧ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಸ್ಫೋಟ ಸಂಪೂರ್ಣ ಆಕಸ್ಮಿಕವೆಂದು ತೋರುತ್ತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಎಲ್ಲಾ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದೂ ಭರವಸೆ ನೀಡಿದರು.

ಎನ್‌ಐಎ ತನಿಖೆ ಕುರಿತ ಪ್ರಶ್ನೆಗೆ ಉತ್ತರಿಸಿ, ಪ್ರೋಟೋಕಾಲ್ ಪ್ರಕಾರ, ಕೇಂದ್ರ ಸಂಸ್ಥೆಗಳು ಸ್ಫೋಟಗಳನ್ನು ಒಳಗೊಂಡ ಘಟನೆಗಳನ್ನು ಪರಿಶೀಲಿಸುತ್ತವೆ, ಆದರೆ ಇಲ್ಲಿಯವರೆಗೆ ಉಗ್ರರ ದಾಳಿ ಎನ್ನುದರ ಬಗ್ಗೆ ಯಾವುದೇ ದೃಢೀಕರಣಗಳು ಲಭ್ಯವಾಗಿಲ್ಲ ಎಂದು ತಿಳಿಸಿದರು.

ಏತನ್ಮಧ್ಯೆ ಗಾಯಗೊಂಡ ಕೊಟ್ರೇಶ್ ನೀಡಿದ ದೂರಿನ ಮೇರೆಗೆ, ಪೊಲೀಸರು ಮೃತ ಸಲೀಂ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ರ ಸೆಕ್ಷನ್ 106, ನಿರ್ಲಕ್ಷ್ಯ ಅಥವಾ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವ ಸೆಕ್ಷನ್ 125 (ಎ) ಮತ್ತು 125 (5) (ಜೀವಕ್ಕೆ ಅಪಾಯವನ್ನುಂಟುಮಾಡುವ ಕೃತ್ಯಗಳು) ಮತ್ತು 1854 ರ ಸ್ಫೋಟಕ ಕಾಯ್ದೆಯ ಸೆಕ್ಷನ್ 98 (1) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com