

ಬೆಂಗಳೂರು: ಕನ್ನಡ ಮತ್ತು ತಮಿಳು ಧಾರಾವಾಹಿಗಳು ಅಭಿನಯಿಸಿದ್ದ ಜನಪ್ರಿಯ ಕಿರುತೆರೆ ನಟಿ ನಂದಿನಿ ಸಿಎಂ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿರುವ ತಮ್ಮ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಂದಿನಿ ಅವರು ಇಂದು ಸಂಜೆ ಬೆಂಗಳೂರಿನ ಆರ್ಆರ್ ನಗರದಲ್ಲಿ ಸಾವಿಗೆ ಶರಣಾಗಿದ್ದು, ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ.
ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅಭಿನಯಿಸಿದ್ದರು.
ಇನ್ನು ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು.
Advertisement