ಪ್ರವಾಸೋದ್ಯಮಕ್ಕೆ ಸರ್ಕಾರ ಹೆಚ್ಚಿನ ಒತ್ತು, ಹೋಂಸ್ಟೇಗಳ ಪರಿಶೀಲನೆಗೆ ಮುಂದು..!

ಭಾರತವು ಕೈಗೆಟುಕುವ ಮತ್ತು ಉತ್ತಮ-ಗುಣಮಟ್ಟದ ಆರೋಗ್ಯ ರಕ್ಷಣೆಗೆ ಆದ್ಯತೆಯ ತಾಣವಾಗಿದೆ, ಪ್ರಪಂಚದಾದ್ಯಂತದ ರೋಗಿಗಳನ್ನು ಆಕರ್ಷಿಸುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಹಾಗೂ ಆರೋಗ್ಯಕರ ಪ್ರವಾಸೋದ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಇದರ ಅನ್ವಯ ರಾಜ್ಯದಲ್ಲಿನ ಹೋಂಸ್ಟೇಗಳ ಸಮೀಕ್ಷೆ ಮತ್ತು ಪರಿಶೀಲನೆ ಕಾರ್ಯ ನಡೆಯುತ್ತಿದೆ ಎದು ಸಚಿವ ಎಚ್.ಕೆ. ಪಾಟೀಲ್ ಅವರು ಶನಿವಾರ ಹೇಳಿದರು.

ನಿನ್ನೆಯಷ್ಟೇ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಿ, ವಿವಿಧ ರಾಜ್ಯಗಳ ಸಹಕಾರದೊಂದಿಗೆ ದೇಶದ 50 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಘೋಷಣೆ ಮಾಡಿದರು.

ಪ್ರವಾಸೋದ್ಯಮದ ಉತ್ತೇಜನಕ್ಕೆ ಅಗತ್ಯ ಮೂಲಸೌಕರ್ಯ ನಿರ್ಮಿಸಲು ಜಮೀನು ಒದಗಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳು ವಹಿಸಿಕೊಳ್ಳಲಿದ್ದು, ಪ್ರಮುಖ ಪ್ರವಾಸಿ ತಾಣಗಳಲ್ಲಿರುವ ಹೋಟೆಲ್‌ಗಳನ್ನು ಮೂಲಸೌಕರ್ಯಗಳ ಪಟ್ಟಿಯಲ್ಲಿ ಸೇರಿಸಲಾಗುವುದು ಮತ್ತು ಅವುಗಳ ಅಭಿವೃದ್ಧಿಗೆ ನೆರವು ನೀಡಲಾಗುವುದು. 'ಹೀಲ್ ಇನ್ ಇಂಡಿಯಾ' ಉಪಕ್ರಮದ ಅಡಿಯಲ್ಲಿ, ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರವು ಖಾಸಗಿ ವಲಯದ ಜೊತೆ ಸಹಕರಿಸುತ್ತದೆ. ಭಾರತವು ಕೈಗೆಟುಕುವ ಮತ್ತು ಉತ್ತಮ-ಗುಣಮಟ್ಟದ ಆರೋಗ್ಯ ರಕ್ಷಣೆಗೆ ಆದ್ಯತೆಯ ತಾಣವಾಗಿದೆ, ಪ್ರಪಂಚದಾದ್ಯಂತದ ರೋಗಿಗಳನ್ನು ಆಕರ್ಷಿಸುತ್ತಿದೆ. ವೀಸಾ ಪ್ರಕ್ರಿಯೆಯನ್ನು ಸರಾಗಗೊಳಿಸುವ ಮೂಲಕ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಸುಧಾರಿಸುವ ಮೂಲಕ, ವೈದ್ಯಕೀಯ ಚಿಕಿತ್ಸೆಗಳು ಮತ್ತು ಕ್ಷೇಮ ಪ್ರವಾಸೋದ್ಯಮಕ್ಕೆ ಜಾಗತಿಕ ಕೇಂದ್ರವಾಗಿ ಭಾರತವನ್ನು ಮತ್ತಷ್ಟು ಸ್ಥಾನದಲ್ಲಿರಿಸುತ್ತದೆ.

ಕೇಂದ್ರ ಬಜೆಟ್ 2025 ಭಾರತದ ಪ್ರವಾಸೋದ್ಯಮ ಕ್ಷೇತ್ರವನ್ನು ವರ್ಧಿಸಲು, ಪ್ರಯಾಣವನ್ನು ಸುಲಭಗೊಳಿಸಲು ಮತ್ತು ವೈದ್ಯಕೀಯ ಪ್ರವಾಸೋದ್ಯಮದಲ್ಲಿ ದೇಶದ ಸಾಮರ್ಥ್ಯವನ್ನು ಹೆಚ್ಚಿಸಲು ಸ್ಪಷ್ಟವಾದ ದೃಷ್ಟಿಕೋನವನ್ನು ವಿವರಿಸುತ್ತದೆ. ವೀಸಾ ಮನ್ನಾ, ಮೂಲಸೌಕರ್ಯ ಅಭಿವೃದ್ಧಿ, ಹೋಮ್‌ಸ್ಟೇ ಹಣಕಾಸು ಮತ್ತು ಖಾಸಗಿ ಸಹಭಾಗಿತ್ವದೊಂದಿಗೆ, ಭಾರತವನ್ನು ಜಾಗತಿಕ ಪ್ರಯಾಣ ಮತ್ತು ಆರೋಗ್ಯದ ತಾಣವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.

ಸಂಗ್ರಹ ಚಿತ್ರ
ಹೂಡಿಕೆಯ ಹೊರತಾಗಿಯೂ ರಾಜ್ಯದಲ್ಲಿ ಪ್ರವಾಸೋದ್ಯಮ ಕುಸಿತ!

ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಹೆಚ್.ಕೆ.ಪಾಟೀಲ್ ಅವರು, ಪ್ರವಾಸೋದ್ಯಮ ಮತ್ತು ಕಂದಾಯ ಇಲಾಖೆಗಳಿಂದ ಹೋಂಸ್ಟೇಗಳ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಕಾಳಜಿ ವಹಿಸುವ ಕೆಲವು ಅಂಶಗಳಿವೆ. ಈ ಬಗ್ಗೆ ಎರಡೂ ಇಲಾಖೆಗಳ ನಡುವೆ ಚರ್ಚೆಗಳು ನಡೆಯುತ್ತಿವೆ. ಹೋಂಸ್ಟೇಗಳ ಪ್ರಮಾಣೀಕರಣ ನಿಯಮಗಳನ್ನು ಬಿಗಿಗೊಳಿಸಲಾಗುತ್ತಿದ್ದು, ಪ್ರತಿಯೊಂದು ಆಸ್ತಿ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಯೊಬ್ಬರು ಮಾತಾಡಿ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಹೋಂಸ್ಟೇಗಳಿವೆ, ಹೆಚ್ಚಾಗಿ ಕೊಡಗು, ಚಿಕ್ಕಮಗಳೂರು ಮತ್ತು ಪಶ್ಚಿಮ ಘಟ್ಟದ ​​ಇತರ ಭಾಗಗಳಲ್ಲಿ ಇವೆ. ಕೊಡಗಿನಲ್ಲಿ ಪ್ರಸ್ತುತ ಒಂದು ಸಮೀಕ್ಷೆ ನಡೆಯುತ್ತಿದೆ. ಅವುಗಳಲ್ಲಿ ಅನುಮತಿ ಪಡೆಯದೆ ನಿರ್ಮಿಸಿರುವ ಹೋಂಸ್ಟೇಗಳಿವೆ. ಆದರೆ. ಈಗ ಕೇಂದ್ರವು ಹೋಂಸ್ಟೇಗಳನ್ನು ಬಜೆಟ್ ನಲ್ಲಿ ಸೇರಿಸಿರುವುದರಿಂದ ಪ್ರವಾಸೋದ್ಯಕ್ಕೆ ಉತ್ತೇಜನ ನೀಡಿದಂತಾಗಿದೆ. ಅದೇ ವೇಳೆ ಇದು ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೂ ಕರೆ ನೀಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com