ಬೆಂಗಳೂರು: ಪಾದಚಾರಿ ಮಾರ್ಗದ​ ಮೇಲೆ ವಾಹನ ಚಲಾಯಿಸಿದರೆ ಲೈಸೆನ್ಸ್​ ರದ್ದು..!

ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವವರ ವಾಹನ ಪರವಾನಗಿಯನ್ನು (ಡಿಎಲ್) ರದ್ದು ಮಾಡಲು ನಿರ್ಧಾರ ಕೈಗೊಂಡಿದ್ದಾರೆ.
ಸಂಚಾರಿ ಪೊಲೀಸರ ಟ್ವೀಟ್.
ಸಂಚಾರಿ ಪೊಲೀಸರ ಟ್ವೀಟ್.
Updated on

ಬೆಂಗಳೂರು: ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರದ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.

ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವವರ ವಾಹನ ಪರವಾನಗಿಯನ್ನು (ಡಿಎಲ್) ರದ್ದು ಮಾಡಲು ನಿರ್ಧಾರ ಕೈಗೊಂಡಿದ್ದಾರೆ.

ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಈ ಹಿಂದೆ ಪಾದಚಾರಿ ಮಾರ್ಗದ​​ ಮೇಲೆ ಗಾಡಿ ಓಡಿಸಿದರೆ ಸಂಚಾರಿ ಪೊಲೀಸರು ದಂಡ ಹಾಕುತ್ತಿದ್ದರು. ದಂಡ ವಿಧಿಸಿದರೂ ಸವಾರರು ಮಾತ್ರ ನಿಯಮ ಉಲ್ಲಂಘಿಸುವುದನ್ನು ಮುಂದುವರೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಕಠಿಣ ಕ್ರಮಕ್ಕೆ ಮುಂಂದಾಗಿದ್ದಾರೆ. ನಿಯಮ ಉಲ್ಲಂಘಿಸುವ ಸವಾರರ ಡ್ರೈವಿಂಗ್​ ಲೈಸೆನ್ಸ್​​ ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಮೊದಲ ಬಾರಿಗೆ ಸಿಕ್ಕಿಬಿದ್ದರೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ ಲೈಸೆನ್ಸ್​ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡಲಿದ್ದಾರೆ.

ಸಂಚಾರಿ ಪೊಲೀಸರ ಟ್ವೀಟ್.
ಡ್ರಗ್ಸ್ ಸೇವಿಸಿ ವಾಹನ ಚಾಲನೆ ಮಾಡಿದರೆ ಜೋಕೆ: ಕಠಿಣ ಕ್ರಮಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಮುಂದು!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com