ಪೆರಿಫೆರಲ್ ರಿಂಗ್ ರೋಡ್ ಗಾಗಿ ಭೂಸ್ವಾಧೀನ: ರೈತರೊಂದಿಗೆ ಚರ್ಚಿಸಿ ವಿವಾದ ಬಗೆಹರಿಸಲು BDA ಅಧಿಕಾರಿಗಳಿಗೆ DCM ಸೂಚನೆ

ನಗರದ ದಟ್ಟಣೆ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ 73 ಕಿಮೀ ಪೆರಿಪೆರಲ್ ರಿಂಗ್ ರೋಡ್ ಯೋಜನೆಯನ್ನು 19 ವರ್ಷಗಳ ಹಿಂದೆ ಪ್ರಸ್ತಾಪಿಸಲಾಗಿತ್ತು.ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಪರಿಹಾರದ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ಮಾರುಕಟ್ಟೆ ಮೌಲ್ಯಕ್ಕೆ ಸಮಾನವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
DK Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರು 27,000 ಕೋಟಿ ರೂಪಾಯಿ ವೆಚ್ಚದ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಪೆರಿಫೆರಲ್ ರಿಂಗ್ ರೋಡ್) ಕಾಮಗಾರಿಗೆ ಅಗತ್ಯವಾಗಿರವ ಭೂಮಿಗಾಗಿ ಭೂಸ್ವಾಧೀನಾಧಿಕಾರಿಗಳು ರೈತರೊಂದಿಗೆ ಮಾತುಕತೆ ನಡೆಸಿ ವಿವಾದಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಗರದ ದಟ್ಟಣೆ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ 73 ಕಿಮೀ ಪೆರಿಪೆರಲ್ ರಿಂಗ್ ರೋಡ್ ಯೋಜನೆಯನ್ನು 19 ವರ್ಷಗಳ ಹಿಂದೆ ಪ್ರಸ್ತಾಪಿಸಲಾಗಿತ್ತು. ಇದು ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ ಮತ್ತು ವೈಟ್‌ಫೀಲ್ಡ್ ರಸ್ತೆ ಮೂಲಕ ತುಮಕೂರು ರಸ್ತೆಯಿಂದ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. 67 ಗ್ರಾಮಗಳಲ್ಲಿ ಹರಡಿರುವ ಒಟ್ಟು 2,560 ಎಕರೆ ಭೂಮಿಯನ್ನು ಸುಮಾರು 4,000 ರೈತರಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ.

ಬಿಡಿಎ ಯೋಜನೆಗಳ ಪರಿಶೀಲನೆ ನಡೆಸಬೇಕಿದ್ದ ಸಚಿವರು ಬಿಡಿಎ ಅಧಿಕಾರಿಗಳನ್ನು ಕಾಯುವಂತೆ ಮಾಡಿದರು. ನಂತರ ಅವರು ಪರಿಶೀಲನೆಗಾಗಿ ಬಿಎಂಆರ್‌ಡಿಎ ಕಚೇರಿಯಲ್ಲಿ ವರದಿ ಮಾಡಲು ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

DK Shivakumar
ಬೆಂಗಳೂರು: ಬಿಡಿಎ ಫ್ಲ್ಯಾಟ್‌ ಮಾರಾಟ ಮೇಳ; 1 ಸಾವಿರ ಮನೆಗಳ ಮಾರಾಟ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com