ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ: ಸ್ಥಳಕ್ಕೆ BWSSB ಅಧಿಕಾರಿಗಳ ಭೇಟಿ, ಪರಿಶೀಲನೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಖ್ಯ ಎಂಜಿನಿಯರ್ ಸುರೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಲುಷಿತ ನೀರು ಸೇವಿಸಿ ನಗರದಲ್ಲಿ 30 ಮಂದಿ ಅಸ್ವಸ್ಥಗೊಂಡ ಘಟನೆಯ ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯೂಎಸ್ಎಸ್'ಬಿ ಅಧಿಕಾರಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಖ್ಯ ಎಂಜಿನಿಯರ್ ಸುರೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಪೂರ್ವ ವಲಯದ ಪುಲಕೇಶಿ ನಗರ ವಾರ್ಡ್‌ನ ಪ್ರೊಮೆನೇಡ್ ರಸ್ತೆಯ 2ನೇ ಕ್ರಾಸ್‌ನಲ್ಲಿರುವ ಹಳೆಯ ತುಕ್ಕು ಹಿಡಿದ ನೀರಿನ ಪೈಪ್‌ನಿಂದ ನೀರು ಮಾಲಿನ್ಯ ಉಂಟಾಗಿರುವುದಾಗಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ತುಕ್ಕು ಹಿಡಿದಿದ್ದ ಪೈಪ್ ಹೊಡೆದಿದ್ದು, ಇದರಿಂದ ನೀರು ಕಲುಷಿತಗೊಂಡಿದೆ. ಇದೀಗ ಸಮಸ್ಯೆ ಸರಿಪಡಿಸಲಾಗಿದ್ದು, ಪ್ರೊಮೆನೇಡ್ ರಸ್ತೆಯ 2 ನೇ ಕ್ರಾಸ್‌ನಲ್ಲಿರುವ ಎಲ್ಲಾ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏತನ್ಮಧ್ಯೆ ಮಾಧ್ಯಮಗಳ ವರದಿಗಳಿಗೆ ಸ್ಥಳೀಯರು ಧನ್ಯವಾದಗಳನ್ನು ತಿಳಿಸಿದ್ದಾರೆ.

Representational image
ಬೆಂಗಳೂರು: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ, BWSSB ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರ ಕಿಡಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com