ಚಿಕ್ಕಮಗಳೂರು: ನೇಣು ಬಿಗಿದುಕೊಂಡು‌ ಸರ್ವೆ ಅಧಿಕಾರಿ ಶಿವಕುಮಾರ್‌ ಆತ್ಮಹತ್ಯೆ

ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್‌ (45) ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಕುಮಾರ್‌
ಶಿವಕುಮಾರ್‌
Updated on

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಸರ್ವೆ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.

ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್‌ (45) ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ನೌಕರರ‌‌ ಸಂಘದ ನಿರ್ದೇಶಕರಾಗಿದ್ದ ಶಿವಕುಮಾರ್ ಅವರು ಮೂಡಿಗೆರೆ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.

ಶಿವಕುಮಾರ್‌
ಬೆಂಗಳೂರು: ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆಯಷ್ಟೇ ಹೊಸ ಸಿಮ್‌ ಖರೀದಿ ಮಾಡಿದ್ದ ಶಿವಕುಮಾರ್‌ ಅವರು, 10 ವರ್ಷಗಳಿಂದ ಬಳಸುತ್ತಿದ್ದ‌ ಸಿಮ್ ಚೇಂಜ್‌ ಮಾಡಿದ್ದರು. ಸದ್ಯ ಸರ್ವೆ ಅಧಿಕಾರಿಯ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಮನೆ ಬಳಿ ಯಾರನ್ನೂ ಬಿಡದೆ ಬ್ಯಾರಿಕೇಡ್ ಹಾಕಿದ್ದು, ಆತ್ಮಹತ್ಯೆ ಕುರಿತು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com