ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಕಾರ

ದೂರುದಾರರ ವಿರುದ್ಧ ಚುನಾವಣೆಯಲ್ಲಿ ಸೋತ ನಂತರ ಮಾಧ್ಯಮಗಳಲ್ಲಿ ಪ್ರಕಟವಾದ ಅರ್ಜಿದಾರರ ಹೇಳಿಕೆಗಳು ಮೇಲ್ನೋಟಕ್ಕೆ ಮಾನನಷ್ಟಕರವೆಂದು ನ್ಯಾಯಾಲಯ ಹೇಳಿದೆ.
Karnataka High Court
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿ ಆದೇಶಿಸಿದೆ.

2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಆರಂಭಿಸಲಾದ ವಿಚಾರಣೆಯನ್ನು ಪ್ರಶ್ನಿಸಿ ಸುರೇಶ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ತಿರಸ್ಕರಿಸಿದ್ದಾರೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲದಿಂದ ಸ್ಪರ್ಧಿಸಿ ತಮ್ಮ ವಿರುದ್ಧ ಸೋತ ಸುರೇಶ್ ಗೌಡ ಅವರು ನೀಡಿದ ಹಲವಾರು ಹೇಳಿಕೆಗಳು ಐಪಿಸಿಯ ಸೆಕ್ಷನ್ 499 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಾಗಿವೆ ಎಂಬ ಆಧಾರದ ಮೇಲೆ ಚಲುವರಾಯಸ್ವಾಮಿ ಮ್ಯಾಜಿಸ್ಟ್ರೇಟ್‌ಗೆ ದೂರು ಸಲ್ಲಿಸಿದ್ದರು.

ದೂರಿನ ಮೇರೆಗೆ ಕಾರ್ಯನಿರ್ವಹಿಸಿದ ಮ್ಯಾಜಿಸ್ಟ್ರೇಟ್, ದೂರುದಾರರ ಪ್ರಮಾಣವಚನ ಹೇಳಿಕೆಯನ್ನು ದಾಖಲಿಸಿದ ನಂತರ ಅಪರಾಧವನ್ನು ಗಮನದಲ್ಲಿಟ್ಟುಕೊಂಡು ಆದೇಶ ಹೊರಡಿಸಿದರು ಮತ್ತು ಗೌಡರಿಗೆ ಸಮನ್ಸ್ ಜಾರಿ ಮಾಡಿದರು, ತದ ನಂತರ ಸುರೇಶ್ ಗೌಡ ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ದೂರುದಾರರ ವಿರುದ್ಧ ಚುನಾವಣೆಯಲ್ಲಿ ಸೋತ ನಂತರ ಮಾಧ್ಯಮಗಳಲ್ಲಿ ಪ್ರಕಟವಾದ ಅರ್ಜಿದಾರರ ಹೇಳಿಕೆಗಳು ಮೇಲ್ನೋಟಕ್ಕೆ ಮಾನನಷ್ಟಕರವೆಂದು ನ್ಯಾಯಾಲಯ ಹೇಳಿದೆ. ಹೇಳಿಕೆಗಳು ಮಾನನಷ್ಟಕರವಲ್ಲ ಎಂದು ಹೇಳಲು ಅರ್ಜಿದಾರರಿಗೆ ಪೂರ್ಣ ವಿಚಾರಣೆಯ ಅಗತ್ಯವಿದೆ. ಮ್ಯಾಜಿಸ್ಟ್ರೇಟ್ ನೀಡಿದ ಆದೇಶವು ಸ್ಪಷ್ಟವಾದ ತಾರ್ಕಿಕತೆಯ ಉತ್ಪನ್ನವಾಗಿದೆ ಎಂದು ಕೋರ್ಟ್ ಹೇಳಿದೆ.

ಸಚಿವ ಚಲುವರಾಯಸ್ವಾಮಿ ಅವರ 100 ಕೋಟಿ ರೂ. ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬುದಾಗಿ ಸುರೇಶ್‌ಗೌಡ ಆರೋಪಿಸಿರುವ ಸಂಬಂಧ ವಿವಿಧ ಪತ್ರಿಕೆಗಳಲ್ಲಿ ವರದಿಯಾಗಿತ್ತು.

Karnataka High Court
ಮುಡಾ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲ್ಲ- ಸ್ನೇಹಮಯಿ ಕೃಷ್ಣ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com