ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಾಲನೆ; ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು

ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆಯಲಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Accident
ಅಪಘಾತ (ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆಯಲಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಕೇರಳ ಮೂಲದ ಸಾಹಹುಕ್ (28) ಅರ್ಶು (23) ಎಂದು ಗುರುತಿಸಲಾಗಿದೆ. ಮೃತರು ಗೊಟ್ಟಿಗೆರೆಯ ಟಿ ಜಾನ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡವರನ್ನು ದೇವ ನಾರಾಯಣ (23) ಮತ್ತು ಸಾಹಿಲ್ (23) ಎಂದು ಗುರುತಿಸಲಾಗಿದೆ. ನಾಲ್ವರು ಗೊಟ್ಟಿಗೆರೆಯ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಅತಿವೇಗವಾಗಿ ಬಂದ Swift ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ನಾಲ್ವರು ಕಳೆದ ರಾತ್ರಿ ಪಾರ್ಟಿ ಮಾಡಿ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ.ಘಟನೆ ನಡೆದ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Accident
ಬೆಂಗಳೂರಿಗೆ ಬರುತ್ತಿದ್ದಾಗ ತಮಿಳುನಟ Yogi babu ಕಾರಿಗೆ ಅಪಘಾತ! ಆಗಿದ್ದೇನು?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com