ದಲಿತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಭೆ: ಬೇಡಿಕೆ ಪರಿಶೀಲಿಸುವ ಭರವಸೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಮುನಿಯಪ್ಪ, ಆರ್. ಬಿ. ತಿಮ್ಮಾಪುರ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
CM Siddaramaiah and others
ಸಿಎಂ ಸಿದ್ದರಾಮಯ್ಯ ಮತ್ತಿತರರು
Updated on

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ 2025-26ನೇ ಸಾಲಿನ ರಾಜ್ಯದ ಆಯವ್ಯಯ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಯಾರಿ ಮುಂದುವರೆದಿದೆ.

ನಿನ್ನೆ ರಾಜ್ಯ ರೈತ ಸಂಘಗಳು ಹಾಗೂ ಮುಖಂಡರುಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳು, ಸಲಹೆಗಳನ್ನು ಆಲಿಸಿದ್ದ ಮುಖ್ಯಮಂತ್ರಿ ಇಂದು ದಲಿತ ಮುಖಂಡರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಮುನಿಯಪ್ಪ, ಆರ್. ಬಿ. ತಿಮ್ಮಾಪುರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ಜಾರಿಗೆ ತಂದಿದ್ದು, ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು.

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ. 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದರು.

CM Siddaramaiah and others
ರಾಜ್ಯ ಬಜೆಟ್ 2025: ರೈತ ಮುಖಂಡರ ಜೊತೆ ಸಿದ್ದರಾಮಯ್ಯ ಸಭೆ; ಅನ್ನದಾತರ ಬೇಡಿಕೆಗಳಿಗೆ ಮೊದಲ ಆದ್ಯತೆ ಎಂದ ಸಿಎಂ

ಬಡ್ತಿಯಲ್ಲಿ ಮೀಸಲಾತಿ, ಪಿಟಿಸಿಎಲ್ ಕಾಯ್ದೆ ಮಾಡಿದ್ದು, ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025 ಮತ್ತು 2026ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com