ಅನುದಾನದಲ್ಲಿ ಕೊರತೆಯಾದರೆ ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಕೆರೆಗಳ ಹೂಳು ತೆಗೆಯುವಿಕೆಯನ್ನು ವೈಜ್ಞಾನಿಕವಾಗಿ ಮಾಡಬೇಕು, ರೈತರು ಅಥವಾ ಇತರರಿಂದ ವಿರೋಧ ವ್ಯಕ್ತವಾದರೆ ಪೊಲೀಸ್ ಭದ್ರತೆಯನ್ನು ತೆಗೆದುಕೊಳ್ಳಬೇಕು.
ಸಚಿವ ಚಲುವರಾಯಸ್ವಾಮಿ
ಸಚಿವ ಚಲುವರಾಯಸ್ವಾಮಿ
Updated on

ಮೈಸೂರು: ಬಜೆಟ್‌ನಲ್ಲಿ ಹಂಚಿಕೆಯಾದ ಅನುದಾನವನ್ನು ಅಧಿಕಾರಿಗಳು ಬಳಸಿಕೊಳ್ಳಬೇಕು. ಅನುದಾನಗಳಲ್ಲಿ ಕೊರತೆಯಾದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆಂದು ಸಚಿವ ಚಲುವರಾಯಸ್ವಾಮಿಯವರು ಮಂಗಳವಾರ ಎಚ್ಚರಿಸಿದರು.

ಮಂಗಳವಾರ ಇಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವ ಮೂಲಕ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಗುರಿಯನ್ನು ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನೀರಾವರಿ ಯೋಜನೆಗೆ 50 ಕೋಟಿ ರೂ. ಹಂಚಿಕೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ. ಕೆರೆಗಳ ಹೂಳು ತೆಗೆಯುವಿಕೆಯನ್ನು ವೈಜ್ಞಾನಿಕವಾಗಿ ಮಾಡಬೇಕು, ರೈತರು ಅಥವಾ ಇತರರಿಂದ ವಿರೋಧ ವ್ಯಕ್ತವಾದರೆ ಪೊಲೀಸ್ ಭದ್ರತೆಯನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಏತನ್ಮಧ್ಯೆ, ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಪ್ರತಿ ಮನೆಗೆ ಪೈಪ್ ಮೂಲಕ ನೀರು ಪೂರೈಸಲು ಜಲ ಜೀವನ್ ಮಿಷನ್ ಅಡಿಯಲ್ಲಿ ಬೋರ್‌ವೆಲ್‌ಗಳ ಸಂಪರ್ಕವನ್ನು ಪೂರ್ಣಗೊಳಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಿಂದಿನ ವರ್ಷಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಿದವರ ಬಾಕಿ ಬಿಲ್‌ಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪಾವತಿಸುವಂತೆ ಸಹಾಯಕ ಆಯುಕ್ತರು, ತಹಶೀಲ್ದಾರ್‌ಗಳು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಚಿವ ಚಲುವರಾಯಸ್ವಾಮಿ
ನೀರಾವರಿ ಸಚಿವರುಗಳ ಸಭೆ: ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ- ಡಿ.ಕೆ ಶಿವಕುಮಾರ್

ಭೂ ಸಮೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಮತ್ತು ದೂರುಗಳ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಬೇಕು. ಯಾವುದೇ ಕುಟುಂಬಕ್ಕೆ ಸಾಮಾಜಿಕ ವಲಯದ ಕಾರ್ಯಕ್ರಮಗಳ ಅಡಿಯಲ್ಲಿ ಯಾವುದೇ ಪ್ರಯೋಜನಗಳನ್ನು ನಿಲ್ಲಿಸಬಾರದು ಎಂದು ಎಂದು ಸೂಚನೆ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯತ್ ಸಭೆಗಳಲ್ಲಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದು, ಕೀಟನಾಶಕಗಳನ್ನು ಬಳಸುವುದು ಮತ್ತು ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಳ್ಳಲು ವಿವೇಚನಾಯುಕ್ತ ಪ್ರಮಾಣದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನೀರಾವರಿ ಇಲಾಖೆಯು ಕೆಆರ್‌ಎಸ್ ಜಲಾಶಯದಿಂದ ಆನ್-ಆಫ್ ವ್ಯವಸ್ಥೆಯಲ್ಲಿ ನೀರು ನೀಡಲು ನಿರ್ಧರಿಸಿರುವುದರಿಂದ ರಬಿ ಬೆಳೆಗಳಿಗೆ ಬಿತ್ತನೆ ಮಾಡುವ ರೈತರಿಗೆ ಬೀಜಗಳು ಮತ್ತು ರಸಗೊಬ್ಬರಗಳನ್ನು ಒದಗಿಸಬೇಕೆಂದು ಹೇಳಿದರು.

ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸಮಸ್ಯೆಗಳನ್ನು ಪರಿಹರಿಸುವ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಧಿಕಾರಿಗಳಿಗೆ ಸಚಿವರು ಇದೇ ವೇಳೆ ನಿರ್ದೇಶನ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com