ಫೈನಾನ್ಸ್ ಸಿಬ್ಬಂದಿ ಕಿರುಕುಳ! ಬೆಳಗಾವಿಯಲ್ಲಿ ವಿಷ ಸೇವಿಸಿ ಮತ್ತೋರ್ವ ಆತ್ಮಹತ್ಯೆ

ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಮೃತಪಟ್ಟ ಕಾರ್ಮಿಕರಾಗಿದ್ದಾರೆ.
CASUAL Images
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಪ್ಪಿಲ್ಲ. ಫೈನಾನ್ಸ್ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಮನೆಯಲ್ಲಿಯೇ ಗುರುವಾರ ರಾತ್ರಿ ವಿಷ ಕುಡಿದಿದ್ದ ಗೋವಿಂದ ಅವರು ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

ಗೋವಿಂದ ಅವರು ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳ ಖರೀದಿಗೆ ಫೈನಾನ್ಸ್ ನಿಂದ ರೂ. 60 ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ದಿ ಸಂಘದಿಂದ ರೂ. 1 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಇದರೊಂದಿಗೆ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ.

CASUAL Images
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com