BBMP ಚುನಾವಣೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ BJP

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲ ಸಂದೀಪ್ ಪಾಟೀಲ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.
BBMP OFFICE
ಬಿಬಿಎಂಪಿ ಕಚೇರಿ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ತಕ್ಷಣ ನಡೆಸುವಂತೆ ನಿರ್ದೇಶಿಸಲು ಕೋರಿ ರಾಜ್ಯ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ,

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲ ಸಂದೀಪ್ ಪಾಟೀಲ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.

ಮಾಜಿ ಮೇಯರ್‌ಗಳಾದ ಎಂ. ಗೌತಮ್, ಆರ್‌. ನಾರಾಯಣಸ್ವಾಮಿ, ಮಾಜಿ ಉಪ ಮೇಯರ್ ಎಸ್‌. ಹರೀಶ್ ಅವರು ಸಹಿ ಮಾಡಿ ಈ ವಕಾಲತ್ತು ಸಲ್ಲಿಸಿದ್ದಾರೆ.

ಈ ಮಧ್ಯೆ, 2013-2015ರಲ್ಲಿ ಚುನಾವಣೆಗಳು 2-3 ವರ್ಷಗಳ ಕಾಲ ವಿಳಂಬವಾದಾಗ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದ ಬೆಂಗಳೂರು ನಗರ ಮಾಜಿ ಮೇಯರ್ ಪಿ.ಆರ್. ರಮೇಶ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಬಿಎಂಪಿ ಚುನಾವಣೆಗಳು 2020 ರಲ್ಲಿ ಬಿಜೆಪಿ ಆಡಳಿತದಲ್ಲಿ ನಡೆಯಬೇಕಿತ್ತು, ಆಗ ಚುನಾವಣೆಗಳು ನಡೆದಿದ್ದರೆ ಅಧಿಕಾರಾವಧಿ ಈಗ ಪೂರ್ಣಗೊಳ್ಳುತ್ತಿತ್ತು, ಆದರೆ ಬಿಜೆಪಿ ಚುನಾವಣೆ ನಡೆಸಲಿಲ್ಲ. ಚುನಾವಣೆಯನ್ನು ಮೊದಲು ಯಾರು ವಿಳಂಬ ಮಾಡಿದರು? ಈಗ ಸಮಯಕ್ಕೆ ಸರಿಯಾಗಿ ಮೊಸಳೆ ಕಣ್ಣೀರು ಸುರಿಸುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

BBMP OFFICE
ನಡೆಯದ ಬಿಬಿಎಂಪಿ ಚುನಾವಣೆ: ಕೌನ್ಸಿಲರ್ ಗಳಿಲ್ಲದೆ ಮಳೆಗಾಲದಲ್ಲಿ ಸಮಸ್ಯೆ ನಿರ್ವಹಿಸುವುದೇ ದುಸ್ತರ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com