ತಿಂಗಳಿಗೆ 2 ಲಕ್ಷ ರೂ ಸಂಬಳ ಪಡೆಯುವ ಮಹಿಳೆಯರಿಂದ ಶಕ್ತಿ ಯೋಜನೆ ಬಳಕೆ: ನಮ್ಮದು ಅಷ್ಟೊಂದು ಶ್ರೀಮಂತ ರಾಜ್ಯವೇ?

"ಶ್ರೀಮಂತರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ ಮತ್ತು ಇದನ್ನು ತಪ್ಪಿಸಬೇಕು. ಯೋಜನೆಯನ್ನು ಪರಿಷ್ಕರಿಸುವ ಬಗ್ಗೆ ನಾವು ನಿರ್ಧರಿಸುತ್ತೇವೆ"
Representational image
ಸಂಗ್ರಹ ಚಿತ್ರ
Updated on

ತುಮಕೂರು: ರಾಜ್ಯ ಸರ್ಕಾರ ಆರಂಭಿಸಿರುವ ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಡವರಿಗೆ ಮಾತ್ರ ಲಭ್ಯವಾಗುವಂತೆ ಮಾಡಬೇಕು ಮತ್ತು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಸೋಮವಾರ ತುಮಕೂರಿನಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಪರಮೇಶ್ವರ್, ಬಡತನ ರೇಖೆಗಿಂತ ಕೆಳಗಿರುವವರು ಖಾತರಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮಾನದಂಡವಾಗಿರಬೇಕು ಎಂದು ಹೇಳಿದರು. ಈ ನಿಟ್ಟಿನಲ್ಲಿ ಸಭೆಯು ನಿರ್ಣಯವನ್ನು ಅಂಗೀಕರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಅವರು ಸೂಚಿಸಿದರು.

ಇದಕ್ಕೂ ಮೊದಲು ಈ ವಿಷಯವನ್ನು ಪ್ರಸ್ತಾಪಿಸಿದ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ, ತಿಂಗಳಿಗೆ 2 ಲಕ್ಷ ರೂ. ಸಂಬಳ ಪಡೆಯುವ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ ಎಂದು ಹೇಳಿದರು. "ನಮ್ಮದು ಅಷ್ಟೊಂದು ಶ್ರೀಮಂತ ರಾಜ್ಯವೇ?" ಎಂದು ಅವರು ಹೇಳಿದರು.

ಇದು ಗಂಭೀರ ವಿಷಯ ಎಂದು ಹೇಳುವ ಮೂಲಕ ಪರಮೇಶ್ವರ ಈ ವಿಷಯಕ್ಕೆ ದನಿಗೂಡಿಸಿದರು. "ಶ್ರೀಮಂತರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ ಮತ್ತು ಇದನ್ನು ತಪ್ಪಿಸಬೇಕು. ಯೋಜನೆಯನ್ನು ಪರಿಷ್ಕರಿಸುವ ಬಗ್ಗೆ ನಾವು ನಿರ್ಧರಿಸುತ್ತೇವೆ" ಎಂದು ಅವರು ಹೇಳಿದರು. ಆದರೆ, ಕಾಂಗ್ರೆಸ್ ಶಾಸಕ ಟಿ. ಷಡಕ್ಷರಿ ಅವರು, ಪಕ್ಷವು ಐದು ವರ್ಷಗಳ ಕಾಲ ಐದು ಖಾತರಿಗಳನ್ನು ಭರವಸೆ ನೀಡಿದೆ ಮತ್ತು ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸಬಾರದು ಎಂದು ಹೇಳಿದರು.

Representational image
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಸಾರಿಗೆ ಇಲಾಖೆಯನ್ನು ದಿವಾಳಿಯ ಅಂಚಿಗೆ ತಳ್ಳುತ್ತಿದೆ: ಬಿ.ವೈ ವಿಜಯೇಂದ್ರ

ಜೆಡಿ(ಎಸ್) ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ಸರ್ಕಾರದ ಬಳಿ ಖಾತರಿಗಳಿಗೆ ಹಣಕಾಸು ಒದಗಿಸಲು ಹಣವಿಲ್ಲ, ಆದ್ದರಿಂದ ಪ್ರಯೋಜನಗಳನ್ನು ಮೊಟಕುಗೊಳಿಸಲು ಯೋಜಿಸುತ್ತಿದೆ ಎಂದು ಆರೋಪಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ 2,800 ಮಹಿಳೆಯರು ಶ್ರೀಮಂತರಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ತ್ಯಜಿಸಲು ಲಿಖಿತವಾಗಿ ಪತ್ರ ಕೊಟ್ಟಿದ್ದಾರೆ. ಅದೇ ರೀತಿ ಇತರೆಡೆಗಳಲ್ಲೂ ಸ್ಥಿತಿವಂತರು ಯೋಜನೆಯ ಸೌಲಭ್ಯ ಬಿಟ್ಟುಕೊಡಬೇಕು ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಸಲಹೆ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com