ಬೆಳಗಾವಿ: ಕೆಲ ಸಂಘಟನೆಗಳಿಂದ ಸರ್ಕಾರದ ವರ್ಚಸ್ಸು ಹಾಳು- ಸತೀಶ್ ಜಾರಕಿಹೊಳಿ

ನಿರ್ವಾಹಕನ ಮೇಲಿನ ಹಲ್ಲೆ ಘಟನೆ ಸಂಬಂಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ಇಲ್ಲಿಗೆ ಯಾವುದೇ ಸಂಘಟನೆ ಬಂದರೂ ಹೊಡೆತ ಬೀಳುವುದು ನಮಗೆ. ಅದನ್ನು ಗಮನಿಸಬೇಕಾಗುತ್ತದೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕೆಲ ಸಂಘಟನೆಗಳು ಜಿಲ್ಲೆ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆಯುಂಟು ಮಾಡುತ್ತಿವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ವಾಹಕನ ಮೇಲಿನ ಹಲ್ಲೆ ಘಟನೆ ಸಂಬಂಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ಇಲ್ಲಿಗೆ ಯಾವುದೇ ಸಂಘಟನೆ ಬಂದರೂ ಹೊಡೆತ ಬೀಳುವುದು ನಮಗೆ. ಅದನ್ನು ಗಮನಿಸಬೇಕಾಗುತ್ತದೆ. ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕೆಲವು ಸಂಘಟನೆಗಳು ಜಿಲ್ಲೆ ಮತ್ತು ಸರ್ಕಾರದ ವರ್ಚಸ್ಸನ್ನು ಹಾಳು ಮಾಡುತ್ತಿವೆ. ಆದ್ದರಿಂದ, ಪ್ರತಿಭಟನೆಗಾಗಿ ಬೆಳಗಾವಿಗೆ ಬರುತ್ತಿರುವ ಸಂಘಟನೆಗಳನ್ನು ತಡೆಯಬೇಕು ಎಂದು ಹೇಳಿದರು.

ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಪೊಲೀಸರು ಅವರ ಕೆಲಸ ಮಾಡಲಿ. ಎರಡು ರಾಜ್ಯಗಳಲ್ಲಿ (ಕರ್ನಾಟಕ ಮತ್ತು ಮಹಾರಾಷ್ಟ್ರ) ಬಸ್‌ಗಳಿಗೆ ಮಸಿ ಬಳಿಯುವುದು ಮತ್ತು ಪ್ರತಿಭಟನೆಗಳಂತಹ ಕೃತ್ಯಗಳು ಬೆಳಗಾವಿ ಮತ್ತು ಸರ್ಕಾರಕ್ಕೆ ಹಾನಿ ಮಾಡುತ್ತವೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಈಗಾಗಲೇ ಕೊಲ್ಹಾಪುರ ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ನಡೆಸಿದ್ದಾರೆ ಮತ್ತು ಅಂತರರಾಜ್ಯ ಬಸ್ ಸೇವೆಗಳು ಶೀಘ್ರದಲ್ಲೇ ಪುನರಾರಂಭಗೊಳ್ಳಲಿವೆ. ಯಾವುದೇ ಸಂಘಟನೆಗಳು ಪ್ರತಿಭಟನೆ ನಡೆಸಲು ಬೆಳಗಾವಿಗೆ ಬರಬಾರದು ಎಂದು ಮನವಿ ಮಾಡಿಕೊಂಡರು.

ಮರಾಠಿಗರಿಗೆ ಮರಾಠಿ ಭಾಷೆಯಲ್ಲಿ ದಾಖಲೆ ಕೊಡುವ ಬೆಳಗಾವಿ ಜಿಲ್ಲಾಧಿಕಾರಿ ಕ್ರಮದ ಕುರಿತು ಮಾತನಾಡಿ, ಕೇಂದ್ರ ಉನ್ನತ ಸಮಿತಿಯು ಈ ನಿಟ್ಟಿನಲ್ಲಿ ಆದೇಶಗಳನ್ನು ಹೊರಡಿಸಿದೆ, ಅದನ್ನು ಪಾಲಿಸಬೇಕು. ಈ ವಿಷಯದ ಬಗ್ಗೆ ಸರ್ಕಾರದ ಅನುಮೋದನೆಯ ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು

ಸತೀಶ್ ಜಾರಕಿಹೊಳಿ
ಬಸ್ ಕಂಡಕ್ಟರ್ ಮೇಲೆ ಹಲ್ಲೆ: ಮರಾಠಿ ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಬಿಜೆಪಿ ಆಗ್ರಹ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com