ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರು ಮಾಸ್ಟರ್ ಮೈಂಡ್​​ಗಳ ಬಂಧನ

ಬಂಧಿತ ಪ್ರಮುಖ ಆರೋಪಿಗಳನ್ನು ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್​ ಹಾಗೂ ಭಾಸ್ಕರ್ ಬೆಳ್ಚಪಾಡ ಅಲಿಯಾಸ್ ಶಶಿ ಥೇವರ್ ಎಂದು ಗುರುತಿಸಲಾಗಿದೆ.
bank robbery in Ullala
ಬ್ಯಾಂಕ್ ದರೋಡೆ
Updated on

ಮಂಗಳೂರು: ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮಂಗಳವಾರ ಇಬ್ಬರು ಮಾಸ್ಟರ್​ ಮೈಂಡ್​ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಪ್ರಮುಖ ಆರೋಪಿಗಳನ್ನು ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್​ ಹಾಗೂ ಭಾಸ್ಕರ್ ಬೆಳ್ಚಪಾಡ ಅಲಿಯಾಸ್ ಶಶಿ ಥೇವರ್ ಎಂದು ಗುರುತಿಸಲಾಗಿದೆ.

6 ತಿಂಗಳ ಹಿಂದೆ ಸ್ಥಳೀಯ ನಿವಾಸಿ ಮಹಮ್ಮದ್ ನಜೀರ್ ಜೊತೆ ಸಂಪರ್ಕ ಸಾಧಿಸಿ, ಸಂಚು ರೂಪಿಸಿ ದರೋಡೆ ನಡೆಸಲು ಈ ಇಬ್ಬರು ದಿನಾಂಕ ಹಾಗೂ ಸಮಯ ನಿಗದಿ ಮಾಡಿದ್ದರು. ಇದೀಗ ಈ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

bank robbery in Ullala
ಕೋಟೆಕಾರು ಬ್ಯಾಂಕ್‌ ದರೋಡೆ: ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ- ಶಾಸಕ ಭರತ್‌ ಶೆಟ್ಟಿ ಆರೋಪ

ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿ ಮತ್ತು ಚಿನ್ನಾಭರಣ ಅಡಗಿಸಿಡಲು ಸಹಕರಿಸಿದ್ದ ಷಣ್ಮುಗಂ ಸುಂದರಂನನ್ನು ಬಂಧಿಸಿದ್ದಾರೆ.

ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್ ಗೆ ಹಾಡಹಗಲೇ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com