ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಹೇಳಿದ ನಾರಾಯಣ್, ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಮತ್ತು ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು ಎಂದರು.
Ashwathnarayan
ಡಾ.ಸಿ.ಎನ್. ಅಶ್ವತ್ಥ ನಾರಾಯಣPrint-ANI-133
Updated on

ಬೆಂಗಳೂರು: ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉನ್ನತ ಶಿಕ್ಷಣ ಸಚಿವ, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ಅಷ್ಟು ಸುಲಭವಲ್ಲ ಎಂದರು.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಹೇಳಿದ ನಾರಾಯಣ್, ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಮತ್ತು ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು ಎಂದರು.

ಮಂಡ್ಯ ವಿಶ್ವವಿದ್ಯಾನಿಲಯ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಮತ್ತು ನೃಪತುಂಗ ವಿಶ್ವವಿದ್ಯಾನಿಲಯ ಎಂಬ ಮೂರು ವಿಶ್ವವಿದ್ಯಾಲಯಗಳನ್ನು ರಾಷ್ಟ್ರೀಯ ಮಟ್ಟದ ಕಾಲೇಜುಗಳಾಗಿ ಗುರುತಿಸಿದ ನಂತರ ಬೊಮ್ಮಾಯಿ ಸರ್ಕಾರ 7 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿತ್ತು.

ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸಂಶೋಧನಾ ಚಟುವಟಿಕೆಗಳಿಗಾಗಿ ಮಹಾರಾಣಿ ಕ್ಲಸ್ಟರ್, ಮಂಡ್ಯ ವಿಶ್ವವಿದ್ಯಾಲಯ ಹಾಗೂ ನೃಪತುಂಗ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಮೊದಲ ಹಂತದಲ್ಲಿ, ಕ್ಲಸ್ಟರ್ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ರಾಷ್ಟ್ರೀಯ ಮಟ್ಟದಲ್ಲಿ ಎಂಟು ಕಾಲೇಜುಗಳನ್ನು ಗುರುತಿಸಲಾಗಿದೆ. ಮಹಾರಾಣಿ ಮಹಿಳಾ ಕಾಲೇಜು ನಾಲ್ಕು ಏಕೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿದೆ. ಮಂಡ್ಯ ಸರ್ಕಾರಿ ಕಾಲೇಜು ಇದೆ. ಇದು ರಾಜ್ಯದ ಹೆಮ್ಮೆ. ಸರ್ಕಾರಿ ವಿಜ್ಞಾನ ಕಾಲೇಜನ್ನು (RUSA)ದ ಎರಡನೇ ಹಂತದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಗುರುತಿಸಲಾಗಿದೆ ಎಂದು ಅವರು ಹೇಳಿದರು.

Ashwathnarayan
ಬಿಜೆಪಿ ಸರ್ಕಾರದ ಅವಧಿಯ ವಿಶ್ವವಿದ್ಯಾಲಯಗಳು ಬಂದ್: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ- ಡಿ.ಕೆ ಶಿವಕುಮಾರ್

ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಕುರಿತು ತಜ್ಞರ ಸಮಿತಿಯ ವರದಿಯನ್ನು ಬಹಿರಂಗಗೊಳಿಸಲಿ ಎಂದು ಸವಾಲು ಹಾಕಿದ ನಾರಾಯಣ್, ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆಗೆ 342 ಕೋಟಿ ರೂ.ಗಳ ಅಗತ್ಯವಿದೆ ಎಂದು ವರದಿಯನ್ನು ನೀಡಿದವರು ಯಾರು? ಉನ್ನತ ಶಿಕ್ಷಣ ಸಚಿವರು ಈ ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಿ ಅವು ಕಾರ್ಯನಿರ್ವಹಿಸುತ್ತಿರುವ ರೀತಿಯನ್ನು ಪರಿಶೀಲಿಸಿದ್ದೀರಾ ಎಂದು ಪ್ರಶ್ನಿಸಿದರು.

ನನ್ನ ಜ್ಞಾನದ ಪ್ರಕಾರ, ಹೊಸ ವಿಶ್ವವಿದ್ಯಾಲಯಗಳು ಹಳೆಯ ವಿಶ್ವವಿದ್ಯಾಲಯಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಈ ವಿಷಯದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com