
ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ತಾಯಿ ಮತ್ತು ಗಂಡು ಮಕ್ಕಳಿಬ್ಬರು ಬಿದ್ದು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ. ಮೃತರನ್ನು 28 ವರ್ಷದ ಗೀತಾ ಬಡಗಿ, ಮಕ್ಕಳಾದ 6 ವರ್ಷದ ಶ್ರವಣ್ ಮತ್ತು 4 ವರ್ಷದ ಶರಣ್ ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ಗೀತಾ ತನ್ನ ತಂದೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆಯಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement