ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ!

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗೋಕಾಕ: ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನಿಗೆ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆ ಗೋಕಾಕ್ ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದಿದೆ.

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ. ಶಾಲೆ ಮುಗಿದ ಬಳಿಕ ನಗರದ ವಾಲ್ಮೀಕಿ ಮೈದಾನಕ್ಕೆ ಬಂದಿದ್ದ 10ನೇ ತರಗತಿ ವಿದ್ಯಾರ್ಥಿಗಳಾದ ರವಿ ಚಿನ್ನವ್ವ, ಅಶೋಕ್ ಕಂಕಣವಾಡಿ, ಸಿದ್ದಾರ್ಥ ಮಟ್ಟಿಕೊಪ್ಪ ಅವರು ಸಹಪಾಠಿ ಪ್ರದೀಪ್ ಬಂಡಿವಡ್ಡರಗೆ ತರಗತಿಯಲ್ಲಿದ್ದ ಬ್ಯಾಗ್ ತರುವಂತೆ ತಿಳಿಸಿದ್ದಾರೆ.

ಇದಕ್ಕೆ ಪ್ರದೀಪ್ ನಿರಾಕರಿಸಿದ್ದು, ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಮೂವರು ಪ್ರದೀಪ್ ಕುತ್ತಿಗೆ, ಕೈ ಮತ್ತು ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ನರಳಾಡುತಿದ್ದ ಪ್ರದೀಪ್‌ನನ್ನು ಸ್ಥಳೀಯ ಶಿಕ್ಷಕರು ಗೋಕಾಕ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರ ಪೊಲೀಸರು ಆಸ್ಪತ್ರೆಗೆ ದೌಢಾಯಿಸಿ ಹಲ್ಲೆಗೊಳಗಾದವನಿಂದ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಇದೀಗ ಬಲೆ ಬೀಸಿದ್ದು, ಈ ಸಂಬಂಧ ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ
ಸಿಗರೇಟ್‌ ಲೈಟರ್‌ ಕೇಳಿದ್ದಕ್ಕೆ ಯುವಕರ ಮೇಲೆ ಅಮಾನುಷ ಹಲ್ಲೆ: ಪ್ರಕರಣ ದಾಖಲು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com