CM Siddaramaiah
ಸಿಎಂ ಸಿದ್ದರಾಮಯ್ಯ

ರಾಜ್ಯ ಉನ್ನತ ಶಿಕ್ಷಣ ಪ್ರವೇಶಾತಿ ಉತ್ತಮಪಡಿಸುವಲ್ಲಿ ಯೋಜನೆಗಳ ರೂಪಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗ ಮಾಹಿತಿ ನೀಡಿದರು.
Published on

ಬೆಂಗಳೂರು: ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ.36 ರಷ್ಟಿದೆ. ದೇಶದ ಶೇಕಡಾವಾರು 27.30 ರಷ್ಟಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು. ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ 3713.73 ಕೋಟಿ ರೂ. ವೆಚ್ಚ ಮಾಡಿ ಶೇ.72.87 ಪ್ರಗತಿ ಸಾಧಿಸಲಾಗಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‍ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

30 ಕೋಟಿ ರೂ. ವೆಚ್ಚದಲ್ಲಿ 21 ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು 9 ಮಹಿಳಾ ಪಾಲಿಟೆಕ್ನಿಕ್‍ಗಳನ್ನು ಉನ್ನತೀಕರಿಸುವ ಕಾರ್ಯ ನಡೆಯುತ್ತಿದೆ. ಮೈಸೂರಿನ ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್‍ನ ನೂತನ ಕಟ್ಟಡ ಕಾಮಗಾರಿಯನ್ನು ಆದಷ್ಟು ಬೇಗನೆ ಆರಂಭಿಸಬೇಕು. ಅನುಮೋದನೆ ನೀಡಲಾಗಿರುವ ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1842 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಒಂದೇ ದಿನದಲ್ಲಿ 1016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಯೊಂದಿಗೆ ಆದೇಶ ನೀಡಲಾಗಿದೆ ಎಂದು ಹೇಳಿದರು.

CM Siddaramaiah
ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ: ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲೀಯರ ಪುನರ್‌ ವಸತಿಗೆ ಸರ್ಕಾರ ನೆರವು- ಸಿಎಂ ಸಿದ್ದರಾಮಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com