Dk Shivakumar
ಡಿ.ಕೆ ಶಿವಕುಮಾರ್

ರಾಜಕೀಯ ಕಾರಣಗಳಿಂದ ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ: ಡಿ.ಕೆ ಶಿವಕುಮಾರ್

400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ.
Published on

ಕಾಂಚಿಪುರಂ: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿದರು. ಈ ವೇಳೆ, 400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ: ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ ಸದಸ್ಯರು ತಮಿಳುನಾಡು ಮೂಲದವರು. ಬಿ ಟೆಕ್ ಪದವಿ ಪಡೆದಿದ್ದಾರೆ ಎಂದರು.

ಒಂದು ದೇಶ ಒಂದು ಚುನಾವಣೆ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಇದು ಬಿಜೆಪಿಯ ರಾಜಕೀಯ ಕುತಂತ್ರ. ನಾವು ಈಗ ಇರುವ ಚುನಾವಣಾ ವ್ಯವಸ್ಥೆಯ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದರು.

Dk Shivakumar
ಸಿದ್ದರಾಮಯ್ಯ ಬೇಕಾದರೂ KPCC ಅಧ್ಯಕ್ಷರಾಗಬಹುದು, ಪಕ್ಷದ ವರಿಷ್ಠರು ಬಯಸಿದರೆ ಸ್ಥಾನ ತ್ಯಜಿಸಲು ಡಿಕೆಶಿ ಸಿದ್ಧ: ಡಿ.ಕೆ ಸುರೇಶ್

ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ ಎಂದು ಹೇಳಿದರು.

ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ ಗುರುಗಳ ನಿರ್ದೇಶನದ ಮೇಲೆ ಗೋವರ್ಧನ ಹೋಮವನ್ನು ವರದರಾಜ ದೇವಾಲಯದಲ್ಲಿ ನೆರವೇರಿಸಿದ್ದೇನೆ. 2023 ರ ವಿಧಾನಸಭಾ ಚುನಾವಣೆ ವೇಳೆ ನಾನು ವರದರಾಜ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೆ. ಜೊತೆಗೆ ತಮಿಳುನಾಡಿನ ಅನೇಕ ದೇವಾಲಯಗಳಿಗೂ ಭೇಟಿ ಕೊಟ್ಟಿದ್ದೆ. ದೇವರ ಅನುಗ್ರಹದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಿತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com