ಬೀದರ್: ಮೇಲ್ಜಾತಿ ಯುವತಿಯ ಪ್ರೀತಿಸಿದ ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ, ಸಾವು!

ಮೃತ ಯುವಕನನ್ನು ಕುಶನೂರು ಗ್ರಾಮದ ನಿವಾಸಿ ಸುಮಿತ್ ಕುಮಾರ್ (18) ಎಂದು ಗುರ್ತಿಸಲಾಗಿದೆ. ಯುವಕ ಕಮಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೀದರ್: ಮೇಲ್ವರ್ಗದ ಯುವತಿಯನ್ನು ಪ್ರೀತಿ­ಸಿದ ದಲಿತ ಯುವಕನಿಗೆ ಮನಬಂದಂತೆ ಥಳಿಸಿ ಹತ್ಯೆ ಮಾಡಿರುವ ಘಟನೆಯೊಂದು ಬೀದರ್ ನಲ್ಲಿ ಸೋಮವಾರ ವರದಿಯಾಗಿದೆ.

ಮೃತ ಯುವಕನನ್ನು ಕುಶನೂರು ಗ್ರಾಮದ ನಿವಾಸಿ ಸುಮಿತ್ ಕುಮಾರ್ (18) ಎಂದು ಗುರ್ತಿಸಲಾಗಿದೆ. ಯುವಕ ಕಮಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದ. ಇದೇ ಗ್ರಾಮದ ಯುವತಿಯನ್ನು ಸುಮಿತ್ ಪ್ರೀತಿಸುತ್ತಿದ್ದ,

ಈ ವಿಚಾರ ತಿಳಿದ ಯುವತಿಯ ತಂದೆ ಹಾಗೂ ಸಹೋದರ ಜನವರಿ.5ರಂದು ಸುಮಿತ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಸುಮಿತ್ ನನ್ನು ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಕಿಶನ್ ಗಾವ್ಲಿ (55) ಮತ್ತು ರಾಹುಲ್ ಗಾವ್ಲಿ (24) ಎಂಬುವವರನ್ನು ಕುಶನೂರು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಬಂಧನಕ್ಕೊಳಪಡಿಸಿದ್ದಾರೆ.

ಸಂಗ್ರಹ ಚಿತ್ರ
ತುಮಕೂರು: ಹಾಲಿನ ವ್ಯಾನ್‌ನಲ್ಲಿ ಅಂಬೇಡ್ಕರ್ ಹಾಡು ಹಾಕಿದ ದಲಿತ ಯುವಕನ ಖಾಸಗಿ ಭಾಗಕ್ಕೆ ಒದ್ದು ಅಮಾನುಷ ಹಲ್ಲೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com