ನಗರದಲ್ಲಿ ಸರಣಿ ಅಪಘಾತ: ಐವರಿಗೆ ಗಾಯ

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.
Accident
ಅಪಘಾತ (ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ನಗರದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಫ್‌ಸಿ ಜಂಕ್ಷನ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಬಳಿಕ ಹೆಚ್ಚಿನ ಹಾನಿ ತಪ್ಪಿಸುವ ಸಲುವಾಗಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನಲ್ಲಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರಿಗೆ ಗಾಯಗೊಂಡಿದೆ.

ಘಟನೆ ಬಳಿಕ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೂರು ವಾಹನಗಳನ್ನು ವಶಪಡಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Accident
ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷ ರೂಪಾಯಿ ನಗದು ರಹಿತ ಚಿಕಿತ್ಸೆ: ನಿತಿನ್ ಗಡ್ಕರಿ ಮಹತ್ವದ ಘೋಷಣೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com