ಬೆಂಗಳೂರು: ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ವ್ಯಕ್ತಿ ಯತ್ನ, ರಕ್ಷಣೆ

ಘಟನೆಯ ನಂತರ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳ ಮೇಲೆ ಕೆಲಕಾಲ ಪರಿಣಾಮ ಬೀರಿದೆ.
ನಮ್ಮ ಮೆಟ್ರೋ
ನಮ್ಮ ಮೆಟ್ರೋ
Updated on

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚಾಗುತ್ತಿವೆ. ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವಿನ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿಯೊಬ್ಬರು ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಸೋಮವಾರ ಬೆಳಗ್ಗೆ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮೆಟ್ರೋ ರೈಲು ಬರುತ್ತಿದ್ದಾಗ 49 ವರ್ಷದ ವಾಯುಪಡೆಯ ಮಾಜಿ ವ್ಯಕ್ತಿಯೊಬ್ಬರು ಟ್ರ್ಯಾಕ್‌ಗೆ ಹಾರಿದ್ದಾರೆ. ಆದರೆ, ಮೆಟ್ರೋ ಸಿಬ್ಬಂದಿಯ ಸಮಯೋಚಿತ ಕ್ರಮದಿಂದಾಗಿ ಅವರ ಜೀವ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ನಂತರ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳ ಮೇಲೆ ಕೆಲಕಾಲ ಪರಿಣಾಮ ಬೀರಿದೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ (BMRCL) ಪ್ರಕಾರ, ಸೋಮವಾರ ಬೆಳಗ್ಗೆ 10.25ರ ಸುಮಾರಿಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗ ಬಿಹಾರ ಮೂಲದ ವಾಯುಪಡೆಯ ಮಾಜಿ ವ್ಯಕ್ತಿ ಅನಿಲ್ ಕುಮಾರ್ ಪಾಂಡೆ ಎಂಬುವವರು ಹಳಿ ಮೇಲೆ ಹಾರಿದ್ದಾರೆ. ಅವರು ಟ್ರ್ಯಾಕ್‌ಗೆ ಜಿಗಿದ ತಕ್ಷಣ, ತುರ್ತು ಟ್ರಿಪ್ ಸಿಸ್ಟಮ್ (ಇಟಿಎಸ್) ಅನ್ನು ಬಳಸಿ BMRCL ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.

ನಮ್ಮ ಮೆಟ್ರೋ
ನಿರ್ವಹಣಾ ವೆಚ್ಚ ಹೆಚ್ಚಳ ಕಾರಣ ಬೆಂಗಳೂರು ಮೆಟ್ರೋ ರೈಲು ಪ್ರಯಾಣ ದರದಲ್ಲಿ ಭಾರಿ ಏರಿಕೆ ಸಾಧ್ಯತೆ!

ಪ್ರಾಥಮಿಕ ಮಾಹಿತಿ ಪ್ರಕಾರ, ಅವರಿಗೆ ಯಾವುದೇ ಗಾಯಗಳಾಗಿಲ್ಲ. 10.50ಕ್ಕೆ ಹಸಿರು ಮಾರ್ಗದಲ್ಲಿ ರೈಲು ಸೇವೆಗಳನ್ನು ಪುನರಾರಂಭಿಸಲಾಯಿತು.

ಬೆಳಿಗ್ಗೆ 10.25 ರಿಂದ 10.50ರವರೆಗೆ ನಾಲ್ಕು ರೈಲುಗಳು ಮಾದಾವರ ಮೆಟ್ರೋ ನಿಲ್ದಾಣದವರೆಗೆ ಬದಲಾಗಿ ಯಶವಂತಪುರ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ಮಾತ್ರ ಸಂಚರಿಸಿದವು ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com