ಜಾತಿ ತಾರತಮ್ಯ ತಡೆಗೆ ಕಾನೂನಿನ ಅಗತ್ಯವಿದೆ: ಹೋರಾಟಗಾರರು

ರೋಹಿತ್ ಅವರ ತಾಯಿ ಮತ್ತು ಜಾತಿ ವಿರೋಧಿ ಹೋರಾಟಗಾರ್ತಿ ರಾಧಿಕಾ ವೇಮುಲ ಅವರು ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿದ್ದರು.
RADHIKA vemula and others
ಕಾರ್ಯಕ್ರಮದಲ್ಲಿ ರಾಧಿಕಾ ವೇಮುಲ ಮತ್ತಿತರರು
Updated on

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಗಾಗಿ ರೋಹಿತ್ ಕಾಯ್ದೆಗಾಗಿ ಜನಾಂದೋಲನ ಸಮಾಲೋಚನ ಸಭೆ ನಗರದ ಸೆಂಟ್ ಜೋಸೆಫ್ ಕಾನೂನು ಕಾಲೇಜಿನಲ್ಲಿ ಭಾನುವಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ವಿರುದ್ಧ ಕಾನೂನಿನ ಅವಶ್ಯವಿದ್ದು, ಸಮಾನ ಹಾಗೂ ಒಳಗೊಳ್ಳುವ ಶಿಕ್ಷಣಕ್ಕಾಗಿ ದೇಶಾದ್ಯಂತ 'ರೋಹಿತ್ ಕಾಯ್ದೆ' ಜಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು.

ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಅವರು ಜಾತಿ ಆಧಾರಿತ ತಾರತಮ್ಯ ಮತ್ತು ಸಾಂಸ್ಥಿಕ ಕಿರುಕುಳದಿಂದ ಬೇಸತ್ತು 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅವರ ಸಾವು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ಉನ್ನತ ಶಿಕ್ಷಣದಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯವನ್ನು ಎತ್ತಿ ತೋರಿಸಿತ್ತು.

ಪ್ರಸ್ತಾವಿತ 'ರೋಹಿತ್ ಕಾಯ್ದೆ' ಈ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದ್ದು, ದುರ್ಬಲ ಸಮುದಾಯಗಳಿಗೆ ಶಿಕ್ಷಣಕ್ಕೆ ಸಮಾನ ಪ್ರವೇಶವನ್ನು ಖಾತ್ರಿಪಡಿಸುತ್ತದೆ.

ರೋಹಿತ್ ಅವರ ತಾಯಿ ಮತ್ತು ಜಾತಿ ವಿರೋಧಿ ಹೋರಾಟಗಾರ್ತಿ ರಾಧಿಕಾ ವೇಮುಲ ಅವರು ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ತನ್ನ ಮಗನನ್ನು ಚುರುಕಾದ ಯುವಕ ಎಂದು ನೆನಪಿಸಿಕೊಂಡ ಅವರು, “ದಲಿತ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಪ್ರತಿ ಹಂತದಲ್ಲೂ ಸಾಂಸ್ಥಿಕವಾಗಿ ತಾರತಮ್ಯಕ್ಕೆ ಒಳಗಾಗುತ್ತಾರೆ. ನಾನು ಅನುಭವಿಸಿದ ನೋವನ್ನು ಬೇರೆ ಯಾವ ತಾಯಿಯೂ ಅನುಭವಿಸಲು ಬಯಸುವುದಿಲ್ಲ. ಈ ಹೋರಾಟ ಕೇವಲ ನ್ಯಾಯಕ್ಕಾಗಿ ಅಲ್ಲ, ಜಾತಿ ವಿರೋಧಿ ಪ್ರಜ್ಞೆ ಮೂಡಿಸಲು ಎಂದರು. ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಬೆಂಗಳೂರಿನ ಐಐಎಂ ಪ್ರೊಫೆಸರ್ ಗೋಪಾಲ್ ದಾಸ್ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

RADHIKA vemula and others
ರೋಹಿತ್ ವೇಮುಲ ದಲಿತನೇ ಅಲ್ಲ; ಆತ್ಮಹತ್ಯೆಗೆ ಇದೇ ಕಾರಣ: ಪೊಲೀಸರ ಅಂತಿಮ ವರದಿ

ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಮುಖಂಡ ಮಾವಳ್ಳಿ ಶಂಕರ್, ಕೇಂದ್ರ ಸರ್ಕಾರವು ಮೂಲಭೂತ ಹಕ್ಕುಗಳ ಹೋರಾಟಗಳ ಬಗ್ಗೆ ಅಸಡ್ಡೆ ಹೊಂದಿದೆ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com