ರಾಯಚೂರಿನಲ್ಲಿ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು, 10 ಮಂದಿಗೆ ಗಾಯ

ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳುತ್ತಿದ್ದ ವೇಳೆ ಸಿಂಧನೂರಿನ ಅರಗಿನಮರದ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ.
ಕ್ರೂಸರ್ ವಾಹನ ಪಲ್ಟಿ
ಕ್ರೂಸರ್ ವಾಹನ ಪಲ್ಟಿ
Updated on

ರಾಯಚೂರು: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಬುಧವಾರ ನಡೆದಿದೆ.

ಮೃತರನ್ನು ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಆರ್ಯವಂದನ್ (18), ಸುಚೇಂದ್ರ (22) ಮತ್ತು ಅಭಿಲಾಷ್ (20) ಎಂದು ಗುರ್ತಿಸಲಾಗಿದೆ. ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳುತ್ತಿದ್ದ ವೇಳೆ ಸಿಂಧನೂರಿನ ಅರಗಿನಮರದ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಂಧನೂರು ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರೂಸರ್ ವಾಹನ ಪಲ್ಟಿ
ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 11 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಣೆ; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com