ಬಳ್ಳಾರಿ ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಅಪಹರಣ: ಭಾರೀ ಹಣಕ್ಕೆ ಬೇಡಿಕೆ

ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ.ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ. ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.

ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದುತಿಳಿದು ಬಂದಿದೆ. ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್‌ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

Representational image
ಅಪಹರಣ ನಾಟಕ: ಕರ್ನಾಟಕದಲ್ಲಿ ರಾಂಚಿಯ ಸಹೋದರಿಯರ ರಕ್ಷಣೆ, ಐವರ ಬಂಧನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com