ಬಲವಂತವಾಗಿ ಸಾಲ ವಸೂಲಾತಿ: ಪರಿಶೀಲಿಸಲು ಜಿಲ್ಲಾಡಳಿತಗಳಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ

ನಾನು ಅನೇಕ ಸ್ಥಳಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭೇಟಿ ನೀಡಿದಾಗ, ಬಹಳಷ್ಟು ಮಹಿಳೆಯರು ಮುಂದೆ ಬಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ತಮ್ಮನ್ನು ಹೇಗೆ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂಬುದರ ಬಗ್ಗೆ ವಿವರಿಸಿದರು.
Nagalakshmi Chowdhary
ನಾಗಲಕ್ಷ್ಮಿ ಚೌಧರಿ
Updated on

ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿಗಾ ಇಡಲು ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಜಾಗೃತ ಸಮಿತಿಯನ್ನು ರಚಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ನಾಗಲಕ್ಷ್ಮಿ, ಮಹಿಳೆಯರಿಂದ ಹಲವಾರು ಕಿರುಕುಳ ದೂರುಗಳು ಬರುತ್ತಿವೆ ಎಂದು ಹೇಳಿದರು.

ನಾನು ಅನೇಕ ಸ್ಥಳಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭೇಟಿ ನೀಡಿದಾಗ, ಬಹಳಷ್ಟು ಮಹಿಳೆಯರು ಮುಂದೆ ಬಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ತಮ್ಮನ್ನು ಹೇಗೆ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂಬುದರ ಬಗ್ಗೆ ವಿವರಿಸಿದರು. ಅವರು ಸಾಲವನ್ನು ಮರುಪಾವತಿಸಲು ತಮ್ಮ ಆಭರಣಗಳನ್ನು ಸಹ ಮಾರಾಟ ಮಾಡಿದ್ದಾರೆ ಎಂದು ಹೇಳಿದರು, ಅದು ಭಾರಿ ಬಡ್ಡಿ ಪಡೆಯುತ್ತದೆ ಎಂದಿದ್ದಾರೆ.

ಚಿತ್ರಹಿಂಸೆಯಿಂದ ತಮ್ಮನ್ನು ರಕ್ಷಿಸುವಂತೆ ಅವರು ನನ್ನಲ್ಲಿ ಮನವಿ ಮಾಡಿದರು ಎಂದು ಅವರು ಹೇಳಿದರು. ಯಾವುದೇ ಸಮಯದಲ್ಲಿ ಜನರುಬಂದು ಪೊಲೀಸರಿಗೆ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೂರುಗಳನ್ನು ಸಲ್ಲಿಸಬಹುದು ಎಂದು ಜನರಿಗೆ ಆಡಳಿತವು ಭರವಸೆ ನೀಡಬೇಕು ಎಂದು ಅವರು ಹೇಳಿದರು.

Nagalakshmi Chowdhary
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದುರಾಡಳಿತ ಎದುರಿಸಲು ಈಗಿರುವ ಕಾನೂನು ಪರಿಣಾಮಕಾರಿಯಾಗಿಲ್ಲ: ಜಿ ಪರಮೇಶ್ವರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com