ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ನಿರ್ಮಾಣವಾದರೂ ಒಬ್ಬನೇ ಒಬ್ಬ ಮುಸ್ಲಿಂ ವಿರೋಧಿಸಲಿಲ್ಲ: ಬಸವರಾಜ ರಾಯರೆಡ್ಡಿ

ಕೊಪ್ಪಳದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಬಸವರಾಜ ರಾಯರೆಡ್ಡಿ, ಮುಸ್ಲಿಮರು ನಮ್ಮ ದೇಶದವರೇ, ಅವರು ಮಂಗಳ ಗ್ರಹದಿಂದ ಬಂದವರಲ್ಲ.
Basvaraj Rayareddi
ಬಸವರಾಜ ರಾಯರೆಡ್ಡಿ online desk
Updated on

ಕೊಪ್ಪಳ: ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ನಿರ್ಮಾಣ ಮಾಡಿದರು, ಆದರೆ ಒಬ್ಬನೇ ಒಬ್ಬ ಮುಸ್ಲಿಂ ಸಹ ಅದನ್ನು ವಿರೋಧಿಸಲಿಲ್ಲ ಹಿಂದೂಗಳಿಗೆ ಹೋಲಿಕೆ ಮಾಡಿದರೆ ಮುಸ್ಲಿಮರು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಕಾಂಗ್ರೆಸ್ ಶಾಸಕ, ವಿಶೇಷ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಬಸವರಾಜ ರಾಯರೆಡ್ಡಿ, ಮುಸ್ಲಿಮರು ನಮ್ಮ ದೇಶದವರೇ, ಅವರು ಮಂಗಳ ಗ್ರಹದಿಂದ ಬಂದವರಲ್ಲ. ಹಿಂದೂಗಳಿಗೆ ಹೋಲಿಕೆ ಮಾಡಿದರೆ ಮುಸ್ಲಿಮರು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ನಿರ್ಮಾಣ ಮಾಡಿದರೂ ಸಹ ಯಾವುದೇ ಒಬ್ಬ ಮುಸ್ಲಿಮರುದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಮಾತನಾಡಿರುವ ರಾಯರೆಡ್ಡಿ, ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದಾರೆ. ಅವರು ಬಡವರ ಪರ ಕಾಳಜಿ ಹೊಂದಿದ್ದಾರೆ. ಅವರು 5 ವರ್ಷ ಸಿಎಂ ಆಗಿರಬೇಕು ಅವಧಿ ಪೂರ್ಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಬೇಡಿಕೆಯಿದೆ. ಈ ಬಜೆಟ್ ನಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಸುವ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.

Basvaraj Rayareddi
ಹೊರಗೆ ಬೆಂಬಲ- ಒಳಗೊಳಗೆ ಸಿಎಂ ಆಗುವ ಹಂಬಲ: ನಾನೂ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದ ಬಸವರಾಜ ರಾಯರೆಡ್ಡಿ

ಇನ್ನು ವಸತಿ ಸಚಿವ ಜಮೀರ್ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವ ರಾಯರೆಡ್ಡಿ, ಜಮೀರ್ ಒಳ್ಳೆಯ ಹೃದಯವಂತ, ಬಡವರ ಪರ ಕಾಳಜಿಯುಳ್ಳ ನಾಯಕ ಎಂದು ಬಣ್ಣಿಸಿದ್ದಾರೆ. ಜಮೀರ್ ಹುಟ್ಟು ಶ್ರೀಮಂತನಾಗಿದ್ದಾನೆ. ಆತನಿಗೆ ರಾಜಕೀಯಕ್ಕೆ ಬಂದು ಹಣ ಗಳಿಸುವ ಅವಶ್ಯಕತೆಯಿಲ್ಲ. ಆದರೆ, ಬಡವರ ಬಗ್ಗೆ ಹೆಚ್ಚು ಕಾಳಜಿಯಿದೆ, ಆತನಿಗೆ ಒಳ್ಳೆಯದಾಗಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com