ಗದಗ: KSRTC ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಕಟ್

ಅಪಘಾತದಲ್ಲಿ ಕಾಲು ಕಳೆದುಕೊಂಡ ವ್ಯಕ್ತಿಯನ್ನು ಮುಂಡರಗಿ ತಾಲ್ಲೂಕಿನ ಹಿರವದತ್ತಿ ಗ್ರಾಮದ ನಿವಾಸಿ ಗವಿಯಪ್ಪ ಬನ್ನಿಕೊಪ್ಪ(27) ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗದಗ: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಕೋರ್ಟ್ ವೃತ್ತದ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರನ ಕಾಲು ಕಟ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಕಾಲು ಕಳೆದುಕೊಂಡ ವ್ಯಕ್ತಿಯನ್ನು ಮುಂಡರಗಿ ತಾಲ್ಲೂಕಿನ ಹಿರವದತ್ತಿ ಗ್ರಾಮದ ನಿವಾಸಿ ಗವಿಯಪ್ಪ ಬನ್ನಿಕೊಪ್ಪ(27) ಎಂದು ಗುರುತಿಸಲಾಗಿದೆ.

ಗವಿಯಪ್ಪ ಅವರು ಮುಂಡರಗಿ ಪಟ್ಟಣದಿಂದ ಹಿರವದಟ್ಟಿ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಗುಳ್ಳಾಪುರ ರಸ್ತೆ ಅಪಘಾತ: ಕ್ಷಣಾರ್ಧದಲ್ಲಿ ಸಾವು ಎದುರಿಗೆ ಬಂದು ಹೋಯಿತು; ಬದುಕುಳಿದ ಪ್ರಯಾಣಿಕರ ಆಘಾತಕಾರಿ ಅನುಭವ!

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗವಿಯಪ್ಪ ಅವರನ್ನು ಚಿಕಿತ್ಸೆಗಾಗಿ ಮುಂಡರಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com