ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ನಿಧನ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ತಡರಾತ್ರಿ ವಿಧಿವಶರಾಗಿದ್ದಾರೆ.
ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ.
ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ.
Updated on

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ತಡರಾತ್ರಿ ವಿಧಿವಶರಾಗಿದ್ದಾರೆ.

ದೇವಸ್ಥಾನವೊಂದರ ಮುಂದೆ ಅಂಧ ಸಹೋದರಿಯರಾದ ಮಂಜಮ್ಮ–ರತ್ನಮ್ಮ ಅವರು ಹಾಡುತ್ತಿದ್ದರು. ಬಳಿಕ ʼಸರಿಗಮಪʼ ಶೋನಲ್ಲಿ ಭಾಗಿಯಾದ ಬಳಿಕ ಇಬ್ಬರೂ ಜನಪ್ರಿಯತೆ ಪಡೆದುಕೊಂಡಿದ್ದರು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ.

ಇಬ್ಬರೂ ಅಕ್ಕ-ತಂಗಿ. ಹುಟ್ಟಿನಿಂದ ಇಬ್ಬರಿಗೂ ಕಣ್ಣಿಲ್ಲ. ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಂಗೀತ ಕಲಿತಿಲ್ಲ. ಹೊಟ್ಟೆಪಾಡಿಗಾಗಿ ಹಾಡಲು ಆರಂಭಿಸಿದವರಾಗಿದ್ದರು. ಅದೇ ಅವರ ವೃತ್ತಿಯೂ ಆಗಿತ್ತು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ರತ್ನಮ್ಮರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.

ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ.
ಭಾರತದ ಮೊದಲ ಕೊರೊನರಿ ಆರ್ಟರಿ ಸರ್ಜರಿಯ ಪ್ರವರ್ತಕ, ಖ್ಯಾತ ಹೃದ್ರೋಗ ತಜ್ಞ ಡಾ. ಕೆ.ಎಂ ಚೆರಿಯನ್ ನಿಧನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com