ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ, ಸಿಎಂ ಪತ್ನಿ ಪಾರ್ವತಿ ಕೂಡ ಭಾಗಿಯಾಗಿಲ್ಲ: ಸಚಿವ ಬೈರತಿ ಸುರೇಶ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಗ್ಗೆ ನಾನು ತುಂಬಾ ಸ್ಪಷ್ಟವಾಗಿದ್ದೇನೆ. ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್
ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್
Updated on

ಬೆಂಗಳೂರು: ಮುಡಾ ಹಗರಣದಲ್ಲಿ ತಾನು ಭಾಗಿಯಾಗಿಲ್ಲ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಪಾತ್ರವೂ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಂಗಳವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಗ್ಗೆ ನಾನು ತುಂಬಾ ಸ್ಪಷ್ಟವಾಗಿದ್ದೇನೆ. ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಪ್ರಕರಣವನ್ನು ಫೆಬ್ರುವರಿ 10 ಕ್ಕೆ ಮುಂದೂಡಲಾಗಿದ್ದು, ನಂತರ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ' ಎಂದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ವಿಚಾರಣೆಗಾಗಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಬೈರತಿ ಸುರೇಶ್ ಮತ್ತು ಸಿಎಂ ಪತ್ನಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

'ನನಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇವೆ. ಇ.ಡಿ ಅಧಿಕಾರಿಗಳು ನಮಗೆ ಏಕೆ ನೋಟಿಸ್ ನೀಡಿದ್ದಾರೆ ಎಂಬುದನ್ನು ವಿವರಿಸಬೇಕು' ಎಂದು ಹೇಳಿದರು.

ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್
ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ED ನೊಟೀಸ್

'ನೋಟಿಸ್ ಬಂದಾಗ ನನಗೆ ಆಶ್ಚರ್ಯವಾಯಿತು. ಹಗರಣ ನಡೆದಾಗ ನಾನು ನಗರಾಭಿವೃದ್ಧಿ ಇಲಾಖೆಯ ಉಸ್ತುವಾರಿ ವಹಿಸಿರಲಿಲ್ಲ. ನಾನು ಯಾವುದೇ ಸೈಟ್‌ಗಳನ್ನು ಮಂಜೂರು ಮಾಡಿಲ್ಲ ಅಥವಾ ಸ್ವಾಧೀನಪಡಿಸಿಕೊಂಡಿಲ್ಲ. ಪ್ರಶ್ನೆಗಳು ಎದ್ದ ನಂತರ, ಸಿಎಂ ಪತ್ನಿಗೆ ಮಂಜೂರು ಮಾಡಿದ್ದ ನಿವೇಶನಗಳನ್ನು ಹಿಂತಿರುಗಿಸಲಾಯಿತು. ಹೈಕೋರ್ಟ್ ನ್ಯಾಯಾಧೀಶರು ಈ ಸಂಗತಿಗಳನ್ನು ಮನಗಂಡರು ಮತ್ತು ತಡೆಯಾಜ್ಞೆ ನೀಡಿದರು. ಇ.ಡಿಯಿಂದ ನನಗೆ ಬಂದ ಮೊದಲ ನೋಟಿಸ್ ಇದಾಗಿದೆ' ಎಂದು ಬೈರತಿ ಸುರೇಶ್ ತಿಳಿಸಿದರು.

ಸಚಿವ ಬೈರತಿ ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ನಾಶಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com