ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರ ಸಾವು

ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಸ್ಫೋಟಗೊಂಡಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವಗೀಡಾದ ದಾರುಣ ಘಟನೆ ನಡೆದಿದೆ. ಅಂತಸರನಹಳ್ಳಿಯಲ್ಲಿರುವ ಇಂಡಸ್ಟ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಸ್ಫೋಟಗೊಂಡಿದ್ದು ಬಿಹಾರ ಮೂಲದ ಸಂತೋಷ್, ಹಾಗೂ ಚಂದನ್ ಶರ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳು ಕಾರ್ಮಿಕರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಜೆ 5.30ರ ಸುಮಾರಿಗೆ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಗ್ರಹ ಚಿತ್ರ
ಗದಗ: KSRTC ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಕಟ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com