Election commission of india
ಚುನಾವಣಾ ಆಯೋಗ

ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ನೋಟಿಸ್

ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು ಬೆಂಗಳೂರು ನಗರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಉಪ ಆಯುಕ್ತ ಜಗದೀಶ್ ಜಿ ತಿಳಿಸಿದ್ದಾರೆ.
Published on

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ (ECI) ನಿರ್ಧರಿಸಿದೆ.

ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು ಬೆಂಗಳೂರು ನಗರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಉಪ ಆಯುಕ್ತ ಜಗದೀಶ್ ಜಿ ತಿಳಿಸಿದ್ದಾರೆ.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 29 (A) ಅಡಿಯಲ್ಲಿ ನೋಂದಾಯಿತ ರಾಜಕೀಯ ಪಕ್ಷಗಳಾದ ನಮ್ಮ ಕಾಂಗ್ರೆಸ್, ಪ್ರಜಾ ರೈತ ರಾಜ್ಯ ಪಕ್ಷ, ಕಲ್ಯಾಣ ಕ್ರಾಂತಿ ಪಕ್ಷ, ಭಾರತೀಯ ಡಾ. ಬಿ.ಆರ್. ಅಂಬೇಡ್ಕರ್ ಜನತಾ ಪಕ್ಷ, ರಕ್ಷಕ ಸೇನೆ, ಮಹಿಳಾ ಪ್ರಧಾನ ಪಕ್ಷ, ಅಂಬೇಡ್ಕರ್ ಜನತಾ ಪಕ್ಷ ಮತ್ತು ಕರ್ನಾಟಕ ಪ್ರಜಾ ವಿಕಾಸ ಪಕ್ಷಗಳಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ ಎಂದು ತಿಳಿಸಿದೆ.

ಈ ಪಕ್ಷಗಳು ಸಕ್ರಿಯವಾಗಿಲ್ಲದ ಕಾರಣ ಮತ್ತು ಅವುಗಳ ವಿಳಾಸಗಳನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಕಳೆದ ಆರು ವರ್ಷಗಳಿಂದ ಯಾವುದೇ ಲೋಕಸಭೆ, ವಿಧಾನಸಭೆ ಅಥವಾ ಉಪಚುನಾವಣೆಗಳಲ್ಲಿ ಸ್ಪರ್ಧಿಸಿಲ್ಲ ಎಂಬ ಕಾರಣಕ್ಕೆ, ಅವುಗಳನ್ನು ಪಟ್ಟಿಯಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ.

ಆದಾಗ್ಯೂ, ಅದಕ್ಕೂ ಮೊದಲು, ಈ ರಾಜಕೀಯ ಪಕ್ಷಗಳಿಗೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಅವಕಾಶವನ್ನು ನೀಡಲಾಗಿದೆ. ಪಕ್ಷದ ನಾಯಕರು, ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಜುಲೈ 18, 2025 ರಂದು ವಿಚಾರಣೆಗೆ ಪಕ್ಷದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಪ್ರಮಾಣಪತ್ರ, ಇತರ ದಾಖಲೆ ಹಾಗೂ ಅರ್ಜಿಯೊಂದಿಗೆ ಹಾಜರಿರಬೇಕು ಎಂದು ತಿಳಿಸಿದೆ.

ನಿಗದಿತ ಸಮಯದೊಳಗೆ ಪಕ್ಷದಿಂದ ಯಾವುದೇ ಲಿಖಿತ ಅರ್ಜಿಯನ್ನು ಸ್ವೀಕರಿಸದಿದ್ದರೆ, ಪಕ್ಷದಿಂದ ಯಾವುದೇ ಹೇಳಿಕೆ ಬಂದಿಲ್ಲ ಎಂದು ಪರಿಗಣಿಸಲಾಗುತ್ತದೆ. ಪಕ್ಷವನ್ನು ಸಂಪರ್ಕಿಸದೆಯೇ ECI ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ADEO ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com